ADVERTISEMENT

ಗ್ರಾಮ ವಾಸ್ತವ್ಯ, ಮನೆಮನೆಗೆ ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2017, 9:12 IST
Last Updated 20 ನವೆಂಬರ್ 2017, 9:12 IST

ಸಿದ್ದಾಪುರ : ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಮಹಿಳಾ ಕಾಂಗ್ರೆಸ್‌ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಆಶ್ರಯದಲ್ಲಿ ಗ್ರಾಮ ವಾಸ್ತವ್ಯ ಹಾಗೂ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ತಾಲ್ಲೂಕಿನ ಹಸವಂತೆಯಲ್ಲಿ ಭಾನುವಾರ ನಡೆಯಿತು.

ಈ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್‌ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಂಗಳಾ ನಾಯ್ಕ, ‘ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಸರ್ಕಾರದ ಯೋಜನೆಗಳ ಉಪಯೋಗವನ್ನು ಎಲ್ಲಾ ವರ್ಗದ ಬಡ ಜನರು ಪಡೆಯುತ್ತಿದ್ದಾರೆ. ಅನ್ನಭಾಗ್ಯ, ಕ್ಷೀರ ಭಾಗ್ಯ,ಇಂದಿರಾ ಕ್ಯಾಂಟೀನ್ ಬಡಜನರ ಹಸಿವನ್ನು ಇಂಗಿಸಿವೆ’ ಎಂದರು.

ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ತಾರಾ ಗೌಡ ಮಾತನಾಡಿ, ‘ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಪಕ್ಷದ ಮಹಿಳಾ ಘಟಕ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಹಿಳಾ ಸಮಾವೇಶ ನಡೆಸಲಾಗುತ್ತಿದ್ದು, ಈ ತಾಲ್ಲೂಕಿನಲ್ಲಿಯೂ ಸಮಾವೇಶ ನಡೆಸಲಾಗುವುದು’ ಎಂದರು.

ADVERTISEMENT

ಜಿಲ್ಲಾ ಪಂಚಾಯ್ತಿ ಸದಸ್ಯೆ ಸುಮಂಗಲಾ ನಾಯ್ಕ, ಮಹಿಳಾ ಕಾಂಗ್ರೆಸ್ ಯುವ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುರೇಖಾ ಶ್ರೀನಿವಾಸ, ತಾಲ್ಲೂಕು ಘಟಕದ ಅಧ್ಯಕ್ಷೆ ಚೈತ್ರಾ ಚಂದ್ರಕಾಂತ ನಾಯ್ಕ, ಉಪಾಧ್ಯಕ್ಷೆ ಸೀಮಾ ಮಂಜುನಾಥ ಹೆಗಡೆ, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ವಸಂತ ನಾಯ್ಕ, ಸದಸ್ಯ ನಾಸೀರ್ ಖಾನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.