ADVERTISEMENT

ನಾಕುದಾಮೊಹಲ್ಲಾದಲ್ಲಿ ಕಡಲ್ಕೊರೆತ

​ಪ್ರಜಾವಾಣಿ ವಾರ್ತೆ
Published 1 ಜುಲೈ 2017, 5:51 IST
Last Updated 1 ಜುಲೈ 2017, 5:51 IST
ಕಾರವಾರದ ತಾಲ್ಲೂಕಿನ ನಾಕುದಾಮೊಹಲ್ಲಾದಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಮಣ್ಣು ಕೊಚ್ಚಿ ಹೋಗಿರುವುದು
ಕಾರವಾರದ ತಾಲ್ಲೂಕಿನ ನಾಕುದಾಮೊಹಲ್ಲಾದಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಮಣ್ಣು ಕೊಚ್ಚಿ ಹೋಗಿರುವುದು   

ಕಾರವಾರ: ‘ಸದಾಶಿವಗಡದ ನಾಕುದಾ ಮೊಹಲ್ಲಾ ಭಾಗದಲ್ಲಿ ಕಡಲ ಕೊರೆತ ಉಂಟಾಗಿದ್ದು, ಸ್ಥಳೀಯ ಜನಪ್ರತಿನಿಧಿ ಗಳು ಈ ಬಗ್ಗೆ ಕ್ರಮವಹಿಸುತ್ತಿಲ್ಲ’ ಎಂದು ಸ್ಥಳೀಯ ನಿವಾಸಿ ಅಮ್ಜದ್ ಅಲಿ ಶೇಖ್ ದೂರಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮೂರು ತಿಂಗಳ ಹಿಂದೆ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಸತೀಶ್‌ ಸೈಲ್‌ ಅವರು, ಬಂಡು ನಿರ್ಮಾಣ ಮಾಡಿಕೊಡು ವುದಾಗಿ ತಿಳಿಸಿದ್ದರು. ಆದರೆ ಈವರೆಗೆ ಅದು ಕಾರ್ಯಗತವಾಗಿಲ್ಲ’ ಎಂದರು.

‘ಸಮುದ್ರದಲ್ಲಿ ಅಲೆಗಳ ಅಬ್ಬರ ದಿನೇ ದಿನೇ ಹೆಚ್ಚುತ್ತಿದ್ದ ಈ ಭಾಗದಲ್ಲಿ ವಾಸಿಸುತ್ತಿರುವ ಜನರಿಗೆ ಆತಂಕ ಎದುರಾಗಿದೆ. ಈಗಾಗಲೇ ಸ್ಥಳೀಯರೇ ಅಲ್ಲಿ ತಾತ್ಕಾಲಿಕವಾಗಿ ಬಂಡು ನಿರ್ಮಾಣ ಕೈಗೊಂಡಿದ್ದಾರೆ.

ADVERTISEMENT

ಆದರೆ ಜನಪ್ರತಿನಿಧಿ ಹಾಗೂ ಅಧಿಕಾರಿಗಳು, ಜಿಲ್ಲಾಡಳಿತ ಈ ಬಗ್ಗೆ ಪರಿಶೀಲನೆ ನಡೆಸಿ, ಆದಷ್ಟು ಶೀಘ್ರವೇ ಕಡಲ್ಕೊರೆತದಿಂದಾಗುವ ಅನಾಹುತ ತಪ್ಪಿಸಲು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.