ಕಾರವಾರ: ಕದ್ರಾ ಕೆಪಿಸಿಯ ಪ್ರವಾಸಿ ಮಂದಿರದ ವ್ಯವಸ್ಥಾಪಕ ಆರ್. ಜಿ. ಪ್ರಭು ಅವರು 65ನೇ ಸ್ವಾತಂತ್ರ್ಯೋತ್ಸವ ಮತ್ತು ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಹಾಗೂ ವಿಶ್ವ ಮಾತೆ ಮದರ್ ತೆರೆಸಾ ಅವರ 101ನೇ ಜಯಂತಿ ಅಂಗವಾಗಿ ನೀಡುವ `ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಭಾರತ ಶಾಂತಿ~ ರಾಷ್ಟ್ರ ಪ್ರಶಸ್ತಿಗೆ ಭಾಜನ ರಾಗಿದ್ದಾರೆ.
ಆರ್.ಜಿ. ಪ್ರಭು ಕೈಗೊಂಡ ಸಮಾಜ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಸೆ. 25ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆಯ ಲಿರುವ ಸಮಾ ರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡ ಲಾಗುವುದು ಎಂದು ಜನತಾ ಸಮಾಜ ಸೇವಾ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.