ADVERTISEMENT

ಮತ್ತೆ ಕಾಣಿಸಿಕೊಂಡ ಚಿರತೆ: ಆತಂಕ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2018, 7:21 IST
Last Updated 15 ಮಾರ್ಚ್ 2018, 7:21 IST

ಮುಂಡಗೋಡ: ತಾಲ್ಲೂಕಿನ ಕ್ಯಾತ್ನಳ್ಳಿ, ಬ್ಯಾನಳ್ಳಿ ಅರಣ್ಯ ಪ್ರದೇಶದಂಚಿನಲ್ಲಿ ಕೆಲ ದಿನಗಳಿಂದ ಕಾಣಿಸಿಕೊಂಡಿದ್ದ ಚಿರತೆಯು, ಮಂಗಳವಾರ ಚವಡಳ್ಳಿ ಗದ್ದೆಯೊಂದರಲ್ಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.

ಕೆಲವು ದಿನಗಳಿಂದ ಚಿರತೆಯು ಸುಳ್ಳಳ್ಳಿ–ಅಂದಲಗಿ ರಸ್ತೆ ಮಧ್ಯೆ ಕಾಣಿಸಿಕೊಂಡು ವಾಹನ ಸವಾರರಲ್ಲಿ ಭಯವನ್ನುಂಟು ಮಾಡಿತ್ತು. ನಂತರ ಅರಣ್ಯ ಇಲಾಖೆಯವರು ಬ್ಯಾನಳ್ಳಿ ಸನಿಹದ ಗದ್ದೆಯೊಂದರಲ್ಲಿ ಪಂಜರ ಇಟ್ಟು ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT