ADVERTISEMENT

ಶಿರಸಿಯಲ್ಲಿ ತಡರಾತ್ರಿ ಮಳೆ: ಸಂಚಾರ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 25 ಮೇ 2018, 5:06 IST
Last Updated 25 ಮೇ 2018, 5:06 IST
ಮಳೆ–ಗಾಳಿಗೆ ಧರೆಗೆ ಉರುಳಿದ ಮರ
ಮಳೆ–ಗಾಳಿಗೆ ಧರೆಗೆ ಉರುಳಿದ ಮರ   

ಶಿರಸಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ತಡರಾತ್ರಿ ಸುರಿದ ಮಳೆ- ಗಾಳಿಗೆ ಅನೇಕ ಕಡೆಗಳಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.

ನಗರದ ಅರಣ್ಯ ಕಾಲೇಜಿನ ಎದುರು ಮರ ನೆಲಕ್ಕುರುಳಿ ಬನವಾಸಿ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ನಗರಸಭೆ ಪೌರಕಾರ್ಮಿಕರು ತೆರವು ಕಾರ್ಯದಲ್ಲಿ ನಿರತರಾಗಿದ್ದಾರೆ.

ರಾತ್ರಿ 1 ಗಂಟೆಯಿಂದ ನಗರದಲ್ಲಿ ವಿದ್ಯುತ್ ಪೂರೈಕೆಯಿಲ್ಲ. ಇದರಿಂದಾಗಿ, ನಗರಸಭೆಯ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.
ದೊಡ್ನಳ್ಳಿ ರಸ್ತೆಯಲ್ಲಿ ಮರ ಮುರಿದು ಬಿದ್ದು ಸಂಚಾರ ಸ್ಥಗಿತಗೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.