ಸಿದ್ದಾಪುರ: ಶೋಷಣೆ ರಹಿತ ಜೀವನವೇ ಸ್ವಾತಂತ್ರ್ಯದ ತಿರುಳು ಎಂಬುದನ್ನು ಸಾಧಿಸಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ತಹಶೀಲ್ದಾರ ಗಣಪತಿ ಕಟ್ಟಿನಕೆರೆ ಹೇಳಿದರು. ಪಟ್ಟಣದ ನೆಹರೂ ಮೈದಾನದಲ್ಲಿ ಬುಧವಾರ ನಡೆದ 66ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಅವರು ಶುಭ ಸಂದೇಶ ನೀಡಿದರು.
`ನಾವು ಭಾರತೀಯರಾಗಿ ಭಾರತೀಯತೆಯನ್ನು ಉಳಿಸಿಕೊಳ್ಳುವುದಕ್ಕೆ ಮಹತ್ವ ನೀಡಬೇಕು.ದೇಶದ ಏಕತೆ, ರಕ್ಷಣೆ, ಸಾಮಾಜಿಕ ನ್ಯಾಯ, ಆಹಾರ ಭದ್ರತೆಗೆ ದುಡಿಯುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯತತ್ಪರರಾಗಬೇಕು~ ಎಂದರು.
`ಕ್ಷಿಪಣಿ ಅಭಿವೃದ್ಧಿಯಲ್ಲಿ ಮಹತ್ವದ ಸಾಧನೆಗೈಯುವ ಮೂಲಕ ದೇಶ ಕ್ಷಿಪಣಿ ಪ್ರತಿರೋಧಕ ವ್ಯವಸ್ಥೆ ಹೊಂದಿರುವ ನಾಲ್ಕನೇ ರಾಷ್ಟ್ರವಾಗಿರುವುದು ಹೆಮ್ಮೆಯ ಸಂಗತಿ. ಬರದಿಂದ ರಾಜ್ಯ ತತ್ತರಿಸುತ್ತಿರುವ ಸಂದರ್ಭದಲ್ಲಿ ಸಾಲಮನ್ನಾ ಕ್ರಮ ರೈತರಿಗೆ ಆಶಾಕಿರಣವಾಗಿದೆ~ ಎಂದರು.
ಪೊಲೀಸ್, ಗೃಹರಕ್ಷಕ ದಳ, ಸ್ಕೌಟ್ಸ್ ಹಾಗೂ ಗೈಡ್ಸ್ಗಳಿಂದ ಗೌರವ ರಕ್ಷೆ ನೀಡಲಾಯಿತು. ಪ.ಪಂ.ಅಧ್ಯಕ್ಷ ಕೆ.ಜಿ.ನಾಯ್ಕ,ಉಪಾಧ್ಯಕ್ಷೆ ನೇತ್ರಾವತಿ ನಾಯ್ಕ, ತಾ.ಪಂ.ಅಧ್ಯಕ್ಷೆ ಶಾಂತಿ ಹಸ್ಲರ್, ಉಪಾಧ್ಯಕ್ಷ ಪ್ರಸನ್ನ ಹೆಗಡೆ, ಜನ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್.ಆರ್. ಹೆಗಡೆಕರ ನಿರೂಪಿಸಿದರು.
ನ್ಯಾಯಾಲಯದಲ್ಲಿ: ಸ್ಥಳೀಯ ನ್ಯಾಯಾಲಯದಲ್ಲಿ ನ್ಯಾಯಾಧೀಶೆ ವಿಮಲಾ ಆರ್. ನಂದಗಾಂವ್ ಧ್ವಜಾರೋಹಣ ನೆರವೇರಿಸಿದರು. ವಕೀಲರ ಸಂಘದ ಅಧ್ಯಕ್ಷ ಎ.ಪಿ.ಭಟ್ಟ ಮುತ್ತಿಗೆ ಮತ್ತು ಇತರ ವಕೀಲರು ಉಪಸ್ಥಿತರಿದ್ದರು.
ಪ.ಪಂ: ಸ್ಥಳೀಯ ಪಟ್ಟಣ ಪಂಚಾಯಿತಿಯಲ್ಲಿ ಪ.ಪಂ. ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷೆ ನೇತ್ರಾವತಿ ನಾಯ್ಕ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.
ನಿವೃತ್ತ ನೌಕರರ ಸಂಘ: ರಾಜ್ಯ ನಿವೃತ್ತ ನೌಕರರ ಸಂಘದ ತಾಲ್ಲೂಕು ಶಾಖೆಯ ಆಶ್ರಯದಲ್ಲಿ ಪಟ್ಟಣದ ಐಶ್ವರ್ಯ ಕಂಪೂಟರ್ಸ್ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಸಂಘದ ಪದಾಧಿಕಾರಿಗಳಾದ ಡಿ.ಸಿ. ನಾಯ್ಕ ಅವರಗುಪ್ಪ, ಜಿ.ಎಂ.ಕುಮಟಾಕರ್,ಪಿ.ವಿ.ಹೆಗಡೆ, ಜಿ.ಐ.ನಾಯ್ಕ, ಎನ್.ಐ.ನಾಯ್ಕ ಕೋಲಸಿರ್ಸಿ, ಎಸ್.ಎಸ್.ರೋಜಾರಿಯೋ ಉಪಸ್ಥಿತರಿದ್ದರು.
ನಿವೇದಿತಾ ಮಹಿಳಾ ಮಂಡಳ: ಪಟ್ಟಣದ ನಿವೇದಿತಾ ಮಹಿಳಾ ಮಂಡಳದಲ್ಲಿ ಅಧ್ಯಕ್ಷೆ ಗಾಯತ್ರಿ ವಿ. ಭಟ್ಟ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಸುರೇಖಾ ಅಂಬೇಕರ್ ಮತ್ತು ಇತರ ಸದಸ್ಯರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.