ADVERTISEMENT

ಕಾರವಾರ ಜಿಲ್ಲೆಯಲ್ಲಿ ಭಾರಿ ಮಳೆ: 1,688 ಜನರ ಸ್ಥಳಾಂತರ

50 ತಾತ್ಕಾಲಿಕ ಪುನರ್ವಸತಿ ಕೇಂದ್ರಗಳು ಆರಂಭ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2019, 14:25 IST
Last Updated 6 ಆಗಸ್ಟ್ 2019, 14:25 IST
ಕಾರವಾರ ತಾಲ್ಲೂಕಿನ ಹಣಕೋಣದ ಅಂಬಿಗ ವಾಡದಲ್ಲಿ ಮಂಗಳವಾರ ಜಲಾವೃತವಾದ ಮನೆಯಿಂದ ಹಿರಿಯರೊಬ್ಬರನ್ನು ಕುಟುಂಬ ಸದಸ್ಯರು ಸುರಕ್ಷಿತ ಪ್ರದೇಶಕ್ಕೆ ಕರೆದುಕೊಂಡು ಹೋದರು
ಕಾರವಾರ ತಾಲ್ಲೂಕಿನ ಹಣಕೋಣದ ಅಂಬಿಗ ವಾಡದಲ್ಲಿ ಮಂಗಳವಾರ ಜಲಾವೃತವಾದ ಮನೆಯಿಂದ ಹಿರಿಯರೊಬ್ಬರನ್ನು ಕುಟುಂಬ ಸದಸ್ಯರು ಸುರಕ್ಷಿತ ಪ್ರದೇಶಕ್ಕೆ ಕರೆದುಕೊಂಡು ಹೋದರು   

ಕಾರವಾರ: ಭಾರಿ ಮಳೆಯಿಂದಾಗಿ ಕಾರವಾರ ಮತ್ತು ಅಂಕೋಲಾ ತಾಲ್ಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲಾವೃತ ಪ್ರದೇಶಗಳಿಂದ ಒಟ್ಟು1,688 ಜನರನ್ನು ಸ್ಥಳಾಂತರಿಸಲಾಗಿದೆ.

ಮಳೆಯಿಂದ ತೊಂದರೆಗೆ ಒಳಗಾಗಿರುವಕಾರವಾರದಲ್ಲಿ16, ಹೊನ್ನಾವರ ತಾಲ್ಲೂಕಿನಲ್ಲಿ 15, ಅಂಕೋಲಾದಲ್ಲಿ 12, ಕುಮಟಾದಲ್ಲಿ ಮೂರು, ಮುಂಡಗೋಡದಲ್ಲಿ ಎರಡು, ಹಳಿಯಾಳದಲ್ಲಿ ಮತ್ತು ಯಲ್ಲಾಪುರದಲ್ಲಿ ತಲಾ ಒಂದು ಒಟ್ಟು 50ತಾತ್ಕಾಲಿಕ ಪುನರ್ವಸತಿ ಕೇಂದ್ರಗಳನ್ನುತೆರೆಯಲಾಗಿದೆ.

ಕಾರವಾರ ಮತ್ತು ಅಂಕೋಲಾದಲ್ಲಿ ನೆರೆಯಲ್ಲಿ ಸಿಲುಕಿದ್ದ ಜನರ ರಕ್ಷಣೆಗೆ ಸ್ಥಳೀಯ ಪೊಲೀಸರು, ಕರಾವಳಿ ಭದ್ರತಾ ಪಡೆ ಮತ್ತು ನೌಕಾದಳದ ಸಹಕಾರವನ್ನು ಜಿಲ್ಲಾಡಳಿತ ಪಡೆದುಕೊಂಡಿದೆ. ಇನ್ನೂ ಮೂರು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದಕಾರಣ ಜಿಲ್ಲೆಯ ಎಲ್ಲ ಅಧಿಕಾರಿ, ಸಿಬ್ಬಂದಿ ಕೇಂದ್ರಸ್ಥಾನದಲ್ಲಿದ್ದು ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವಂತೆ ಸೂಚಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್ ತಿಳಿಸಿದ್ದಾರೆ.

ADVERTISEMENT

ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಅವರು ಕುಮಟಾ, ಹೊನ್ನಾವರ, ಅಂಕೋಲಾ ತಾಲ್ಲೂಕುಗಳಲ್ಲಿಮಳೆಯಿಂದ ಹಾನಿಗೊಳಗಾದ ಕೆಲವು ಸ್ಥಳಗಳನ್ನು ಮಂಗಳವಾರ ಪರಿಶೀಲಿಸಿದರು. ಜಿಲ್ಲಾಧಿಕಾರಿ, ಎಸ್‌ಪಿಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್ಪ್ರವಾಹ ಪೀಡಿತ ಕದ್ರಾದಲ್ಲಿ ಮಂಗಳವಾರ ಮೊಕ್ಕಾಂ ಹೂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.