ADVERTISEMENT

ಶಿರಸಿ: ಕಾರ್ನಾಡ್ ಕಲಿತ ಶಾಲೆಗೆ ₹ 3.12 ಕೋಟಿ ಅನುದಾನ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 16:36 IST
Last Updated 1 ಅಕ್ಟೋಬರ್ 2021, 16:36 IST

ಶಿರಸಿ: ಜ್ಞಾನ ಪೀಠ ಪುರಸ್ಕೃತ ಗಿರೀಶ‌ ಕಾರ್ನಾಡ ಕಲಿತ ನಗರದ ರಾಯಪ್ಪ ಹುಲೇಕಲ್ ಶಾಲೆ ಹಾಗೂ ಮಾರಿಕಾಂಬಾ ಪ್ರೌಢಶಾಲೆ ಅಭಿವೃದ್ಧಿಗೆ ₹3.12 ಕೋಟಿ ಬಿಡುಗಡೆಯಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

‘ಜ್ಞಾನ ಪೀಠ ಪುರಸ್ಕೃತರು‌ ಕಲಿತ ಶತಮಾನ ಪೂರೈಸಿದ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಯೋಜನೆ ರೂಪಿಸಿದೆ. 20220–21ನೆ ಸಾಲಿನ ಬಜೆಟ್‍ನಲ್ಲಿ ಘೋಷಣೆಯಾದಂತೆ ಅನುದಾನ ಬಿಡುಗಡೆಯಾಗಿದೆ’ ಎಂದು ತಿಳಿಸಿದ್ದಾರೆ.

‘ರಾಯಪ್ಪ ಹುಲೇಕಲ್ ಶಾಲೆಗೆ ₹91.25 ಲಕ್ಷ, ಮಾರಿಕಾಂಬಾ ಸರಕಾರಿ ಪ್ರೌಢಶಾಲೆಗೆ ₹221.09 ಲಕ್ಷ ಮಂಜೂರು ಮಾಡಲಾಗಿದೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.