ಕಾರವಾರ/ ಕುಮಟಾ: ಅಪರೂಪದ ಬಿಳಿ ಹೆಬ್ಬಾವೊಂದು, ತಾಲ್ಲೂಕಿನ ಮಿರ್ಜಾನ್ ಬಳಿಯ ರಾಮನಗರದಲ್ಲಿ ಮನೆಯೊಂದ ಬಳಿ ಸೋಮವಾರ ಕಂಡುಬಂದಿದೆ. ಅದನ್ನು ಉರಗ ತಜ್ಞರು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಸುಬ್ರಹ್ಮಣ್ಯ ನಾಯ್ಕ ಅವರ ಮನೆಯ ಬಳಿ ಇದ್ದ ಹಾವನ್ನು ಯಾವ ಪ್ರಭೇದದ್ದು ಎಂದು ಗುರುತಿಸಲಾಗದೇ ಸ್ಥಳೀಯರು ಗೊಂದಲಕ್ಕೀಡಾದರು. ವಿಷಯ ತಿಳಿದ ಉರಗ ತಜ್ಞ ಪವನ್ ಎಂ.ನಾಯ್ಕ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಬಿಳಿ ಹೆಬ್ಬಾವು ಎಂದು ಖಾತ್ರಿಪಡಿಸಿದರು.
ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ನ ಕೊರತೆಯಿಂದ ಹಾವುಗಳ ಬಣ್ಣ ಬಿಳಿಯಾಗುತ್ತದೆ. ಇಂಥ ಹಾವುಗಳನ್ನು ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯುತ್ತಾರೆ. ಆದರೆ, ಅಲ್ಬಿನೋ ಹಾವುಗಳಾದರೆ ಕಣ್ಣು ಸಹ ಕೆಂಪು ಮಿಶ್ರಿತ ಬಿಳಿ ಬಣ್ಣ ಇರುತ್ತದೆ. ಇದರ ಕಣ್ಣು ಅರ್ಧ ಮಾತ್ರ ಬಿಳಿ ಇದ್ದು ಇನ್ನರ್ಧ ಕಪ್ಪಾಗಿದೆ. ಹಾಗಾಗಿ ಆ ಗುಂಪಿಗೆ ಸೇರಿಸಲು ಸಾಧ್ಯವಿಲ್ಲ. ಹಾವನ್ನು ಸುರಕ್ಷಿತ ಪ್ರದೇಶಕ್ಕೆ ಬಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.