ADVERTISEMENT

ಸಾಹಸಿ ಯುವಕನಿಗೆ ಪ್ರಶಂಸಾ ಪತ್ರ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 13:29 IST
Last Updated 14 ಫೆಬ್ರುವರಿ 2020, 13:29 IST
ಆದಿತ್ಯ ಶಿವಳ್ಳಿ ಅವರಿಗೆ ನಂಜಾ ನಾಯ್ಕ ಪ್ರಶಂಸಾ ಪತ್ರ ನೀಡಿದರು
ಆದಿತ್ಯ ಶಿವಳ್ಳಿ ಅವರಿಗೆ ನಂಜಾ ನಾಯ್ಕ ಪ್ರಶಂಸಾ ಪತ್ರ ನೀಡಿದರು   

ಶಿರಸಿ: ಮುರೇಗಾರ ಜಲಪಾತದ ನೀರಿನಲ್ಲಿ ಸಿಲುಕಿ ಅಪಾಯದಲ್ಲಿದ್ದ ಮೂವರನ್ನು ರಕ್ಷಿಸಿದ್ದ ಹುಬ್ಬಳ್ಳಿಯ ಆದಿತ್ಯ ಮಲ್ಲಿಕಾರ್ಜುನ ಶಿವಳ್ಳಿ ಅವರಿಗೆ ಪೊಲೀಸ್ ಇಲಾಖೆ ಶುಕ್ರವಾರ ಪ್ರಶಂಸಾ ಪತ್ರ ನೀಡಿ ಗೌರವಿಸಿದೆ.

ಸಂಕ್ರಾಂತಿಯಂದು ತಾಲ್ಲೂಕಿನ ಮುರೇಗಾರ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದ ಹುಬ್ಬಳ್ಳಿಯ ಇಂದುಧರ ಮುತ್ತಳ್ಳಿ, ಅಕ್ಷರ ಮುತ್ತಳ್ಳಿ ಹಾಗೂ ಬಳ್ಳಾರಿಯ ಬಸಪ್ಪ ಕೊಡಬಾಳ ಅವರು ಈಜಲು ಇಳಿದಾಗ ತೀವ್ರ ಅಪಾಯದಲ್ಲಿ ಸಿಲುಕಿ, ಸಾವು–ಬದುಕಿನ ನಡುವೆ ಹೋರಾಡುತ್ತಿದ್ದರು. ಇದನ್ನು ಗಮನಿಸಿದ ಯುವಕ ಆದಿತ್ಯ, ಈ ಮೂವರನ್ನು ನೀರಿನ ಸೆಳೆತದಿಂದ ಹೊರ ತಂದು ಅವರ ಜೀವ ಉಳಿಸಿದ್ದಾರೆ.

ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಯುವಕನ ಸಾಹಸವನ್ನು ಮೆಚ್ಚಿದ್ದಾರೆ. ಅವರ ಸೂಚನೆಯಂತೆ ಗ್ರಾಮೀಣ ಠಾಣೆ ಪಿಎಸ್‌ಐ ನಂಜಾ ನಾಯ್ಕ, ಆದಿತ್ಯ ಅವರಿಗೆ ಪ್ರಶಂಸಾ ಪತ್ರ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.