ADVERTISEMENT

ಚುಟುಕು ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷರಾಗಿ ಡಾ.ಎ.ಕೆ.ಶಾಸ್ತ್ರಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 16:16 IST
Last Updated 1 ನವೆಂಬರ್ 2019, 16:16 IST
ಡಾ. ಎ.ಕೆ.ಶಾಸ್ತ್ರಿ
ಡಾ. ಎ.ಕೆ.ಶಾಸ್ತ್ರಿ   

ಶಿರಸಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್‌ನ ಉತ್ತರ ಕನ್ನಡ ಜಿಲ್ಲಾ ಘಟಕದ ನಾಲ್ಕನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇತಿಹಾಸ ತಜ್ಞ ಡಾ. ಎ.ಕೆ.ಶಾಸ್ತ್ರಿ ಆಯ್ಕೆಯಾಗಿದ್ದಾರೆ. ನ.17ರಂದು ಇಲ್ಲಿನ ಮಾರಿಕಾಂಬಾ ಕಲ್ಯಾಣ ಮಂಟಪದಲ್ಲಿ ಸಮ್ಮೇಳನ ನಡೆಯಲಿದೆ ಎಂದು ಸಂಘಟನೆ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.

ಸಂಶೋಧನಾ ಕೇಂದ್ರದಲ್ಲಿ ರಾಜ್ಯೋತ್ಸವ

ಶಿರಸಿ: ಇಲ್ಲಿನ ತೋಟಗಾರಿಕಾ ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕೇಂದ್ರ ಮುಖ್ಯಸ್ಥ ಪ್ರಶಾಂತ ಎ ಅವರು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕೇಂದ್ರದ ಅಧೀಕ್ಷಕ ಸುಧೀಶ ಕುಲಕರ್ಣಿ, ಸಿಬ್ಬಂದಿ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.