ಕಾರವಾರ: ಯಾಂತ್ರೀಕೃತ ಮೀನು ಗಾರಿಕೆ ದೋಣಿಗಳ ಮೂಲಕ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ, ಒಟ್ಟು 61 ದಿನ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಪಿ.ನಾಗರಾಜ ತಿಳಿಸಿದ್ದಾರೆ.
ಈ ಅವಧಿಯಲ್ಲಿ ಕೇವಲ ದೋಣಿಗಳ ಚಲನವಲನಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ, ನಾಡದೋಣಿಗಳಿಗೆ ಅವಕಾಶವಿದೆ. ಅವುಗಳ ಮೂಲಕ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಲು ಅನುಮತಿ ಇದೆ ಎಂದು ಅವರು ಹೇಳಿದ್ದಾರೆ.
ಇದನ್ನು ಉಲ್ಲಂಘಿಸಿದರೆ ಕರ್ನಾಟಕ ಕಡಲ ಮೀನು ಗಾರಿಕೆ (ನಿಯಂತ್ರಣ) ಕಾಯ್ದೆ 1986ರ ಅಡಿ ಕಾನುನು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಮತ್ತು ಕೇಂದ್ರ ಅಬಕಾರಿ ತೆರಿಗೆ ಮರು ಪಾವತಿಯನ್ನು ಪಡೆಯಲು ಅನರ್ಹರಾಗಿತ್ತಾರೆ ಎಂದು ಎಚ್ಚರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.