ಶಿರಸಿ: ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ತಾಲ್ಲೂಕಿನ ಮಳಲಿ ಗ್ರಾಮದ ಅರುಣ ಗೌಡ ಅವರನ್ನು ನೇಮಿಸಿ ಜಿಲ್ಲಾ ಘಟಕದ ಅಧ್ಯಕ್ಷ ಗಣಪಯ್ಯ ಗೌಡ ನೇಮಕ ಮಾಡಿದ್ದಾರೆ.
ಪಕ್ಷದ ವಿವಿಧ ಘಟಕಗಳಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಗುತ್ತಿದೆ. ಯುವ ಘಟಕಕ್ಕೆ ಪಕ್ಷದ ವರಿಷ್ಠರ ಸೂಚನೆಯಂತೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಉತ್ತಮ ಸಂಘಟನಾ ಚತುರರನ್ನು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಿಯೋಜಿಸುತ್ತಿರುವುದಾಗಿ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
‘ಜೆಡಿಎಸ್ ಪಕ್ಷದ ಹಿರಿಯರೊಂದಿಗೆ ಸೇರಿ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುತ್ತೇನೆ. ಪ್ರತಿ ತಾಲ್ಲೂಕುಗಳಿಗೂ ಸಂಚರಿಸಿ ಯುವಕರನ್ನು ಪಕ್ಷಕ್ಕೆ ಸೆಳೆಯುವ ಜೊತೆಗೆ ಮುಂಬರುವ ದಿನದಲ್ಲಿ ಪ್ರಾದೇಶಿಕ ಪಕ್ಷದಲ್ಲಿ ಯುವಕರಿಗೆ ಮನ್ನಣೆ ದೊರೆಯುವಂತೆ ಮಾಡುವ ಗುರಿ ಇದೆ’ ಎಂದು ಅರುಣ ಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.