ಬಾಂಬ್ ಬೆದರಿಕೆ
(ಸಾಂದರ್ಭಿಕ ಚಿತ್ರ)
ಭಟ್ಕಳ: ಭಟ್ಕಳದಲ್ಲಿ ಹುಸಿ ಬಾಂಬ್ ಸ್ಫೋಟಿಸುವ ಬೆದರಿಕೆ ಈಮೇಲ್ ಹಾಕಿದ ಪ್ರಕರಣದ ಆರೋಪಿ ನಿತಿನ್ ಶರ್ಮಾ ಯಾನೆ ಖಾಲೀದ್ನನ್ನು ಕೇರಳಕ್ಕೆ ಮಹಜರಿಗಾಗಿ ಭಟ್ಕಳ ಪೊಲೀಸರು ಕರೆದೊಯ್ದಿದ್ದಾರೆ.
ದೆಹಲಿಯ ಪಟೇಲ್ ನಗರದ ನಿವಾಸಿ ನಿತಿನ್ ಶರ್ಮಾ ಯಾನೆ ಖಾಲೀದ್ ಸೆ.10ರಂದು ಭಟ್ಕಳ ಶಹರ ಠಾಣೆಗೆ ಭಟ್ಕಳವನ್ನು 24 ಗಂಟೆಯೊಳಗೆ ಸ್ಪೋಟಿಸುವಂತೆ ಬೆದರಿಕೆಯ ಸಂದೇಶವುಳ್ಳ ಇ-ಮೇಲ್ ಹಾಕಿದ್ದ.
ಆತನನ್ನು ಮಹಜರಿಗಾಗಿ ಕೇರಳದ ಮೂನಾರಿಗೆ ಕರೆದೊಯ್ಯಲಾಗಿದೆ. ಭಟ್ಕಳದಲ್ಲಿನ ಬಾಂಬ್ ಬೆದರಿಕೆ ಪ್ರಕರಣವೂ ಸೇರಿದಂತೆ ಒಟ್ಟು 16 ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದು ಬಂದಿದೆ.
ಕೇರಳದಿಂದ ತಮಿಳುನಾಡು ಮೂಲದ ಕಣ್ಣನ್ ಗುರುಸ್ವಾಮಿ ಎಂಬಾತನ ಮೊಬೈಲ್ನಿಂದ ಆತನದ್ದೇ ಇಮೇಲ್ ಮೂಲಕ ಬೆದರಿಕೆ ಹಾಕಿದ್ದ, ಈತನು ಪೊಲೀಸರು ತಮಿಳುನಾಡಿಗೆ ತೆರಳಿ ತನಿಖೆ ನಡೆಸಿದಾಗ ನೈಜ ಆರೋಪಿಯ ಬಗ್ಗೆ ತಿಳಿದುಬಂದಿತ್ತು. ಅದಾಗಲೇ ಬಾಂಬ್ ಸ್ಫೋಟದ ಬೆದರಿಕೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಮೈಸೂರು ಜೈಲಿನಲ್ಲಿದ್ದ ಆರೋಪಿಯನ್ನು ಬಾಡಿ ವಾರಂಟ್ ಮೂಲಕ ಕರೆ ತಂದ ಭಟ್ಕಳ ಪೊಲೀಸರು ಕೇರಳದಲ್ಲಿ ಕೃತ್ಯ ಎಸಗಿರುವ ಜಾಗದಲ್ಲಿ ಮಹಜರು ನಡೆಸುತ್ತಿದ್ದಾರೆ. ಈತನ ವಿರುದ್ಧ ಕೇರಳದಲ್ಲಿ 6, ದೆಹಲಿಯಲ್ಲಿ 1, ಮಧ್ಯಪ್ರದೇಶದಲ್ಲಿ 1, ಪುದುಚೇರಿಯಲ್ಲಿ 2, ಉತ್ತರಾಖಂಡ್ದಲ್ಲಿ 1, ಒಡಿಸ್ಸಾದಲ್ಲಿ 1, ಆಂಧ್ರಪ್ರದೇಶದಲ್ಲಿ 1 ಹಾಗೂ ಕರ್ನಾಟಕದಲ್ಲಿ 3 ಪ್ರಕರಣ ದಾಖಲಾಗಿವೆ ಎಂದು ಮಾಹಿತಿ ಲಭ್ಯವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.