
ಪ್ರಜಾವಾಣಿ ವಾರ್ತೆ
ಬಂಧನ
ಭಟ್ಕಳ: ತಾಲ್ಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಸೋಮವಾರ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಶಹರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪಟ್ಟಣದ ಹನುಮಾನನಗರದ ಕನ್ನಡ ಶಾಲೆಯ ಹತ್ತೀರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಹನಿಫಾಬಾದ್ ನಿವಾಸಿ ಮಹ್ಮದ ಸವೂದ್ ಮಹ್ಮದ ಇಸ್ಮಾಯಿಲ್ (30) ಹಾಗೂ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ತಲಗೇರಿ ಕ್ರಾಸ್ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಪಟ್ಟಣದ ಮಗ್ದೂಂ ಕಾಲೊನಿ ನಿವಾಸಿ ಮೊಹದ್ದೀನ್ ನೂರುಲಾಮೀನ್ ತಾಹಿರ್ (19) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವೈದ್ಯಕೀಯ ತಪಾಸಣೆ ಬಳಿಕ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.