ಪಡಿತರ ಅಕ್ಕಿ
ಭಟ್ಕಳ: ತಾಲ್ಲೂಕಿನ ತೆರ್ನಮಕ್ಕಿಯಲ್ಲಿ ಶನಿವಾರ ದಾಖಲೆಗಳಿಲ್ಲದೆ ಓಮಿನಿ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವೇಳೆ ತಾಲ್ಲೂಕು ಆಹಾರ ನಿರೀಕ್ಷಕ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಭಟ್ಕಳ ಪುರವರ್ಗ ಪಹೀಮ್ ಮಹ್ಮದ್ (35) ಆರೋಪಿ. ವಾಹನದಲ್ಲಿದ್ದ 6 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಪಡಿಸಿಕೊಳ್ಳಲಾಗಿದೆ. ಕಂದಾಯ ಇಲಾಖೆ ಆಹಾರ ನಿರೀಕ್ಷಕ ಉದಯ ತಳವಾರ ಅವರು ನೀಡಿದ ದೂರಿನ ಮೇರೆಗೆ ಮುರುಡೇಶ್ವರ ಪಿಎಸ್ಐ ಹನುಮಂತ ಬಿರಾದಾರ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.