ದಾಂಡೇಲಿ: ನಗರದ ಸಮೀಪ ಹರಿಯುವ ಕಾಳಿ ನದಿಯಿಂದ ಮೀನು ಹಿಡಿಯಲು ಭಾನುವಾರ ಗಾಳ ಹಾಕಿ ಕುಳಿತಿದ್ದ ಬಾಲಕನನ್ನು ಮೊಸಳೆ ಎಳೆದುಕೊಂಡು ಹೋಗಿದೆ. ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ವಿನಾಯಕ ನಗರದ ನಿವಾಸಿ ಮೊಹೀನ್ ಮೊಹಮ್ಮದ್ ಗುಲ್ಬರ್ಗ (15) ಮೊಸಳೆ ದಾಳಿಗೆ ಒಳಗಾದವನು. ಆತ ದಾಂಡೇಲಿಯ ಹಳಿಯಾಳ ರಸ್ತೆಯ ಕಾಳಿ ನದಿ ದಂಡೆಯಲ್ಲಿ ಬೆಳಿಗ್ಗೆ ಮೀನು ಹಿಡಿಯಲು ಕುಳಿತಿದ್ದ. ಇದ್ದಕ್ಕಿದ್ದಂತೆ ದಾಳಿ ಮಾಡಿದ ಮೊಸಳೆಯು ಅವನನ್ನು ಕಚ್ಚಿ ನೀರಿಗೆ ಎಳೆದೊಯ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಜಂಗಲ್ ಲಾಡ್ಜ್ ರೆಸಾರ್ಟ್ ಸಿಬ್ಬಂದಿ ಬಾಲಕನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಶೋಧ ಕಾರ್ಯಕ್ಕೆ ಅನುಕೂಲವಾಗುವಂತೆ ಸೂಪಾ ಜಲಾಶಯದಿಂದ ನೀರಿನ ಹರಿವು ನಿಲ್ಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.