ADVERTISEMENT

ಚುನಾವಣೆ ಸಿದ್ಧತೆಗೆ ಶೀಘ್ರವೇ ರಾಜ್ಯ ಪ್ರವಾಸ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2022, 12:18 IST
Last Updated 6 ಫೆಬ್ರುವರಿ 2022, 12:18 IST
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ   

ನಿವಳಿ (ಕಾರವಾರ): ‘ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾದ ಬಳಿಕ 15– 20 ದಿನಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತೇನೆ. ಪ್ರತಿ ಜಿಲ್ಲೆಯಲ್ಲಿ ಪಕ್ಷವನ್ನು ಬಲಪಡಿಸಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 135ರಿಂದ 140 ಸ್ಥಾನಗಳನ್ನು ಬಿ.ಜೆ.ಪಿ ಗೆಲ್ಲಲು ಬೇಕಾದ ಎಲ್ಲ ಸಿದ್ಧತೆ ಮಾಡುತ್ತಿದ್ದೇವೆ’ ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕಾರವಾರ ತಾಲ್ಲೂಕಿನ ದೇವಳಮಕ್ಕಿ ಗ್ರಾಮದ ನಿವಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ನಿಟ್ಟಿನಲ್ಲಿ ಶನಿವಾರವಷ್ಟೇ ಪಕ್ಷದ ಎಲ್ಲ ಮುಖಂಡರ ಜೊತೆ ಸಮಾಲೋಚನೆ ಮಾಡಿದ್ದೇನೆ’ ಎಂದರು.

‘ದೇಶದಲ್ಲಿ ನಡೆಯುತ್ತಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ಬಿ.ಜೆ.ಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರ ಅಲೆಯಿದೆ. ಹಾಗಾಗಿ ಪಕ್ಷಕ್ಕೆ ಎಲ್ಲೂ ಹಿನ್ನಡೆ ಆಗುವುದಿಲ್ಲ. ಅದೇ ರೀತಿ, ಮಾಧ್ಯಮದಲ್ಲಿ ಏನೇ ವರದಿಗಳು ಬಂದರೂ ಗೋವಾದಲ್ಲೂ ಬಿ.ಜೆ.ಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಅದರಲ್ಲಿ ಯಾವುದೇ ಅನುಮಾನ ಬೇಡ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.