ADVERTISEMENT

ಕಾರು ಪಲ್ಟಿ: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 7:08 IST
Last Updated 21 ಮಾರ್ಚ್ 2019, 7:08 IST
   

ಅಂಕೋಲಾ: ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಯೊಬ್ಬರು ತಾಲ್ಲೂಕಿನ ಹೊಸೂರು ಸೇತುವೆ ಬಳಿ ಗುರುವಾರ ಕಾರು ಪಲ್ಟಿಯಾಗಿ ಮೃತಪಟ್ಟಿದ್ದಾರೆ.

ಭಟ್ಕಳದ ಶಮಾಜ್ ಗೋಲ್ಟೆ (22) ಮೃತಪಟ್ಟವರು. ಅಪಘಾತದಲ್ಲಿ ಅವರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಬಾಹ್ಯ ವಿದ್ಯಾರ್ಥಿಯಾಗಿದ್ದ ಅವರು, ಭಟ್ಕಳದಿಂದ ಕಾರವಾರದ ಮದರಸಾ ಪರೀಕ್ಷಾ ಕೇಂದ್ರಕ್ಕೆ ಬರುತ್ತಿದ್ದರು.

ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಒಬ್ಬ ಪರೀಕ್ಷೆ ಬರೆಯಲು ಕಾರವಾರಕ್ಕೆ ಹೋಗಿದ್ದಾರೆ. ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ADVERTISEMENT

ಘಟನೆ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.