ADVERTISEMENT

ಅಕ್ರಮ ಜಾನುವಾರು ಸಾಗಾಟ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 7:57 IST
Last Updated 5 ಜನವರಿ 2021, 7:57 IST
ಯಲ್ಲಾಪುರ ಪೊಲೀಸರು ವಶಪಡಿಸಿಕೊಂಡಿರುವ ಜಾನುವಾರುಗಳು
ಯಲ್ಲಾಪುರ ಪೊಲೀಸರು ವಶಪಡಿಸಿಕೊಂಡಿರುವ ಜಾನುವಾರುಗಳು   

ಯಲ್ಲಾಪುರ: ಅಕ್ರಮ ಮತ್ತು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ 22 ಜನುವಾರುಗಳನ್ನು ಯಲ್ಲಾಪುರ ಪೊಲೀಸರು ತಾಲ್ಲೂಕಿನ ಹಳಿಯಾಳ ಕ್ರಾಸ ಬಳಿ ಸೋಮವಾರ ಬೆಳಿಗ್ಗೆ ಲಾರಿ ಸಮೇತವಾಗಿ ವಶಪಡಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ.

ಲಾರಿಯ ಚಾಲಕ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಹೈದರ್ ರಮಲ್ಲಾನ್ (39), ಅಬ್ದುಲ್ ರಜಾಕ್ ಅಬ್ದುಲ್ ಅಬೂಬ್ಕರ್ (53) ಉಜಿರೆ ಬೆಳ್ತಂಗಡಿ, ಹಾಗೂ ಲಾರಿ ಮಾಲಕ ಬೆಂಗಳೂರಿನ ಚಾಮರಾಜ ಪೇಟೆಯ ಅಬೂಬ್ಕರ್ ದಿಲ್ಶಾದ್ ಅಬ್ದುಲ್ ಹಮೀದ್ ಎಸ್.ಎ.(32) ಬಂಧಿತರು. ಇನ್ನಿಬ್ಬರು ಆರೋಪಿಗಳು ಪರಾಗಿಯಾಗಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರದಿಂದ ಮಂಗಳೂರಿಗೆ ಎರಡು ಎಮ್ಮೆ ಹಾಗೂ 20 ಕೋಣಗಳನ್ನು ಹಿಂಸಾತ್ಮಕವಾಗಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ವಶಪಡಿಸಿಕೊಂಡ ಜಾನುವಾರು ಹಾಗೂ ವಾಹನದ ಮೌಲ್ಯ ₹ 14,60 ಲಕ್ಷ ಎಂದು ಅಂದಾಜಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.