ADVERTISEMENT

ಜಾನುವಾರು ಅಕ್ರಮ ಸಾಗಾಟ: ಬಂಧನ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 2:55 IST
Last Updated 30 ನವೆಂಬರ್ 2020, 2:55 IST
ಯಲ್ಲಾಪುರ ಪೊಲೀಸರು ವಶಪಡಿಸಿಕೊಂಡ ಜಾನುವಾರುಗಳು
ಯಲ್ಲಾಪುರ ಪೊಲೀಸರು ವಶಪಡಿಸಿಕೊಂಡ ಜಾನುವಾರುಗಳು   

ಯಲ್ಲಾಪುರ: ಸರಕು ಸಾಗಣೆ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ 3 ಮಂದಿಯನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.

ವಾಹನದ ಚಾಲಕ ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಹುಮಾಯಿನ್ ಅಲ್ಲಾಭಕ್ಷ್‌ ಪಟೇಲ್ (38), ಉತ್ತರಪ್ರದೇಶದ ಕೂಲಿ ಕೆಲಸಗಾರರಾದ ಜರೀಫ್ ಅಬ್ದುಲ್ ಮಜೀದ್ (44) ಹಾಗೂ ನವೀ ಮಹ್ಮದ್ ಅಸಗರ ಅಲಿ (35) ಬಂಧಿತರು. 15 ಎಮ್ಮೆಗಳನ್ನು ಬೆಳಗಾವಿ ಜಿಲ್ಲೆ ಯರಗಟ್ಟಿಯಿಂದ ಸಾಗಿಸುತ್ತಿದ್ದರು ಎನ್ನಲಾಗಿದೆ. ಪೊಲೀಸರು ಲಾರಿಯನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು ಎಮ್ಮೆಗಳನ್ನು ಗೋಶಾಲೆಗೆ ರವಾನಿಸಲಾಗಿದೆ ಎಂದು ಪೊಲೀಸ್ ನಿರೀಕ್ಷಕ ಸುರೇಶ ಯಳ್ಳೂರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT