ADVERTISEMENT

ತಡೆಗೋಡೆಗೆ ₹ 1 ಕೋಟಿ ಬಿಡುಗಡೆ: ಸಿ.ಎಂ. ಆದೇಶ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2019, 14:44 IST
Last Updated 3 ಆಗಸ್ಟ್ 2019, 14:44 IST
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಶಾಸಕಿ ರೂಪಾಲಿ ನಾಯ್ಕ ಬೆಂಗಳೂರಿನಲ್ಲಿ ಶನಿವಾರ ಭೇಟಿ ಮಾಡಿದರು
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಶಾಸಕಿ ರೂಪಾಲಿ ನಾಯ್ಕ ಬೆಂಗಳೂರಿನಲ್ಲಿ ಶನಿವಾರ ಭೇಟಿ ಮಾಡಿದರು   

ಕಾರವಾರ:ದೇವಬಾಗ ಅಂಬಿಗವಾಡ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸಲು ತಕ್ಷಣವೇ ₹ 1 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಂದರು ಇಲಾಖೆಗೆ ಶನಿವಾರ ಆದೇಶಿಸಿದ್ದಾರೆ.

ಕಡಲ್ಕೊರೆತದಿಂದ ಭೂಪ್ರದೇಶ ಸಮುದ್ರ ಪಾಲಾಗುತ್ತಿದೆ. ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಶಾಸಕಿ ರೂಪಾಲಿ ನಾಯ್ಕ, ಆ.3ರಂದು ಮುಖ್ಯಮಂತ್ರಿಗೆ ಬೆಂಗಳೂರಿನಲ್ಲಿ ನೀಡಿದ ಮನವಿಯಲ್ಲಿ ತಿಳಿಸಿದ್ದರು. ಸುಮಾರು 120 ಮೀಟರ್ ಉದ್ದದ ಹಳೆಯ ತಡೆಗೋಡೆಯ ದುರಸ್ತಿ ಮತ್ತು ಮರು ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆಯೂ ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT