ADVERTISEMENT

ಲಾಕ್‌ಡೌನ್ ಆದೇಶ ಉಲ್ಲಂಘನೆ: ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 14:52 IST
Last Updated 4 ಏಪ್ರಿಲ್ 2020, 14:52 IST

ಅಂಕೋಲಾ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ದೇಶದಾದ್ಯಂತವಿಧಿಸಲಾಗಿರುವ ಲಾಕ್‌ಡೌನ್ ಆದೇಶ ಉಲ್ಲಂಘಿಸಿದ ವ್ಯಕ್ತಿಯೊಬ್ಬರವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಾಗಲಕೋಟೆಯಿಂದ ಬಂದಿದ್ದರಾಜಶೇಖರ ಚೌವ್ಹಾಣ್ (50), ತಾಲ್ಲೂಕಿನ ಸುಂಕಸಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶುಕ್ರವಾರ ತಿರುಗಾಡುತ್ತಿದ್ದರು.ಅವರನ್ನು ಪ್ರಶ್ನಿಸಿದಾಗ ತಾನೊಬ್ಬ ಸಿವಿಲ್ ಕಾಂಟ್ರಾಕ್ಟರ್ ಎಂದು ಹೇಳಿದ್ದರು.ಅಗತ್ಯ ಕೆಲಸವಿಲ್ಲದೇಸಂಚರಿಸುವುದನ್ನು ನಿಷೇಧಿಸಿದ್ದರೂ ಪಾಲಿಸಲಿಲ್ಲ. ಅವರನ್ನು ವಶಕ್ಕೆ ಪಡೆದ ಪೊಲೀಸರು, ಅಂಕೋಲಾದ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT