ADVERTISEMENT

ಕಾರವಾರ|ಗ್ಯಾರಂಟಿ ನೆಪದಲ್ಲಿ ಅಭಿವೃದ್ಧಿ ಕುಂಠಿತಗೊಳ್ಳಬಾರದು

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ನೀಲಕಂಠ ಕೆ.ಎನ್. ಅಭಿಮತ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2023, 14:49 IST
Last Updated 17 ಆಗಸ್ಟ್ 2023, 14:49 IST

ಕಾರವಾರ: ‘ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ ಈ ನೆಪದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕುಂಠಿತಗೊಳಿಸಬಾರದು’ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ನೀಲಕಂಠ ಕೆ.ಎನ್. ಹೇಳಿದರು.

ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡವರು, ಮಧ್ಯಮ ವರ್ಗದ ಜನರಿಗೆ ನೆರವಾಗುವ ಗ್ಯಾರಂಟಿ ಯೋಜನೆ ಜಾರಿಯನ್ನು ಸ್ವಾಗತಿಸುತ್ತೇವೆ. ಆದರೆ ನಗರ, ಗ್ರಾಮೀಣ ಭಾಗದಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಎಲ್ಲ ರೀತಿಯ ಮೂಲಸೌಕರ್ಯಗಳನ್ನೂ ಒದಗಿಸುವ ಕೆಲಸ ನಿರಂತರವಾಗಿ ನಡೆಯಬೇಕು’ ಎಂದು ಒತ್ತಾಯಿಸಿದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಾಜಕೀಯ ಕಾರಣಕ್ಕೆ ಹಾಳುಗೆಡಹುವ ಪ್ರಯತ್ನ ನಡೆಯುತ್ತಿದೆ. ದೇಶದ ಹಲವೆಡೆ ಹಿಂಸಾಚಾರ ನಡೆಯುತ್ತಿರುವುದು ಇದಕ್ಕೆ ಕಾರಣ. ಜಿಲ್ಲೆ ಮತ್ತು ರಾಜ್ಯದಲ್ಲಿ ಅಂತಹ ಸ್ಥಿತಿ ಎದುರಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದರು.

ADVERTISEMENT

ಜಿಲ್ಲಾ ಘಟಕದ ಉಪಾಧ್ಯಕ್ಷ ವಿನಾಯಕ ನಾಯ್ಕ, ಗಣಪತಿ ನಾಯ್ಕ, ಸಂದೀಪ ನಾಯ್ಕ, ಫಕೀರ ಸಾಳುಂಕೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.