ಶಿರಸಿ: ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮಾತ್ರ ಬಿಜೆಪಿ ವಿರುದ್ಧ ಗೆಲ್ಲಲು ಸಾಧ್ಯ. ಜೆಡಿಎಸ್ ವರಿಷ್ಠರು ಇದನ್ನು ಗಮನಿಸಿ ಟಿಕೆಟ್ ಕೇಳಬೇಕು ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಉತ್ತರ ಕನ್ನಡ ಕ್ಷೇತ್ರದಲ್ಲಿ ಜೆಡಿಎಸ್ ಗೆ ಟಿಕೆಟ್ ನೀಡುವುದನ್ನು ಕಾಂಗ್ರೆಸ್ ಧುರೀಣರು ಒಕ್ಕೊರಲಿನಿಂದ ವಿರೋಧಿಸಿದರು.
ಹಲವು ತಾಲ್ಲೂಕುಗಳಲ್ಲಿ ಜೆಡಿಎಸ್ ಕಚೇರಿಯಿಲ್ಲ.
ಒಂದು ಶಾಸಕ, ಒಂದೇ ಒಂದು ನಗರ ಸ್ಥಳೀಯ ಸಂಸ್ಥೆಯಲ್ಲಿ ಅಧಿಕಾರವಿಲ್ಲ. ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 1.30 ಲಕ್ಷ ಮಾತ್ರ ಮತ ಬಂದಿವೆ.
ಇಂಥ ಕಡೆ ಜೆಡಿಎಸ್ ಮೀಸಲಾತಿ ಯಾಕೆ ಕೇಳ್ತಾ ಇದ್ದಾರೆ ಗೊತ್ತಿಲ್ಲ ಎಂದು ದೇಶಪಾಂಡೆ ಪ್ರಶ್ನಿಸಿದರು.ಸಂದರ್ಭ ಬಂದಾಗ ನನಗೆ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಗೊತ್ತಿದೆ ಎಂದು ಸೂಚ್ಯವಾಗಿ ಹೇಳಿದರು.
ಜಿಲ್ಲೆಯ ಕಾಂಗ್ರೆಸ್ ಶಾಸಕರು, ಕಾರ್ಯಕರ್ತರ ಜೊತೆ ದೇಶಪಾಂಡೆ ಸಭೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.