ಕಾರವಾರ: ನಗರದಲ್ಲಿ ತಡರಾತ್ರಿಯಿಂದ ಬಿಡುವು ನೀಡಿದ್ದ ಮಳೆಯು, ಬುಧವಾರ ಬೆಳಿಗ್ಗೆ 9ರಿಂದ ಧಾರಾಕಾರವಾಗಿ ಸುರಿಯುತ್ತಿದೆ. ಚರಂಡಿಗಳಲ್ಲಿ ಭರ್ತಿಯಾಗಿ ಹರಿದು, ಕೆಎಚ್ ಬಿ ಕಾಲೊನಿ, ಹಬ್ಬುವಾಡಾ, ಸಂಕ್ರಿವಾಡಾ ಮುಂತಾದೆಡೆ ರಸ್ತೆಯಲ್ಲಿ ನೀರು ತುಂಬಿದೆ.
ನಗರದ ಕಾಳಿ ನದಿ ಸೇತುವೆಯ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲೇ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ದಟ್ಟವಾಗಿ ಕಾರ್ಮೋಡ ಕವಿದಿದ್ದು, ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.