ADVERTISEMENT

ಅಂಕೋಲಾ ಹೈಟೆಕ್ ಬಸ್ ನಿಲ್ದಾಣ: ‘ಕಾಮಗಾರಿ ಇನ್ನೂ ವಿಳಂಬವಾದರೆ ಕ್ರಮ’

ಗುತ್ತಿಗೆದಾರರ ವಿರುದ್ಧ ಅಸಮಾಧಾನ                

​ಪ್ರಜಾವಾಣಿ ವಾರ್ತೆ
Published 3 ಮೇ 2019, 14:54 IST
Last Updated 3 ಮೇ 2019, 14:54 IST
ಅಂಕೋಲಾ ಬಸ್ ನಿಲ್ದಾಣದ ಕಾಮಗಾರಿಯ ಬಗ್ಗೆ ಅಧಿಕಾರಿಗಳು ಗುತ್ತಿಗೆದಾರರಿಂದ ಶುಕ್ರವಾರ ಮಾಹಿತಿ ಪಡೆದುಕೊಂಡರು.
ಅಂಕೋಲಾ ಬಸ್ ನಿಲ್ದಾಣದ ಕಾಮಗಾರಿಯ ಬಗ್ಗೆ ಅಧಿಕಾರಿಗಳು ಗುತ್ತಿಗೆದಾರರಿಂದ ಶುಕ್ರವಾರ ಮಾಹಿತಿ ಪಡೆದುಕೊಂಡರು.   

ಅಂಕೋಲಾ:ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಇದನ್ನು ಶುಕ್ರವಾರಪರಿಶೀಲಿಸಿದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಸಹಾಯಕ ಕಾರ್ಯನಿರ್ವಾಹಕಎಂಜಿನಿಯರ್ದಿವಾಕರ ಯರಗುಪ್ಪ, ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.

₹ 3.85ಕೋಟಿವೆಚ್ಚದಲ್ಲಿ ನಡೆಯುತ್ತಿರುವ ಬಸ್ನಿಲ್ದಾಣದ ಕಾಮಗಾರಿ ಆರಂಭವಾಗಿ ಒಂದು ವರ್ಷ ಕಳೆಯಿತು. ಆದರೆ,ಅರ್ಧದಷ್ಟೂಕಾಮಗಾರಿಯಾಗಿಲ್ಲ. ಈ ಬಗ್ಗೆ ಸಾರ್ವಜನಿಕರುಹಲವು ಬಾರಿ ಸಂಸ್ಥೆಯ ಹಿರಿಯ ಅಧಿಕಾರಿಗಳಿಗೆ ದೂರಿದ್ದರು.

ಕಾಮಗಾರಿಯನ್ನು ಪರಿಶೀಲಿಸಿದ ದಿವಾಕರ ಯರಗುಪ್ಪ ಮತ್ತುಸಂಸ್ಥೆಯ ಎಂಜಿನಿಯರ್ಕೆ.ಬಿ.ಕುಲಕರ್ಣಿ, ಸ್ಥಳದಲ್ಲಿದ್ದ ಗುತ್ತಿಗೆದಾರರಿಂದ ಮಾಹಿತಿ ಪಡೆದರು. ಗುತ್ತಿಗೆದಾರರಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ, ‘ಕೆಲಸ ಮಾಡುವುದಾದರೆ ನಿಷ್ಠೆಯಿಂದ ಮಾಡಿ. ಇಲ್ಲದಿದ್ದರೆ ನಿರ್ದಾಕ್ಷಿಣ್ಯವಾಗಿ ನಿಮ್ಮ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು’ ಎಚ್ಚರಿಕೆ ನೀಡಿದರು.

ADVERTISEMENT

ಇದೇವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಂದು ತಿಂಗಳಿನಲ್ಲಿ ಮಳೆಗಾಲ ಆರಂಭವಾಗುತ್ತದೆ. ಜೂನ್ ಅಂತ್ಯದೊಳಗೆ ಎಲ್ಲಾ ಕಾಮಗಾರಿ ಪೂರ್ಣಗೊಳ್ಳಬೇಕಿದೆ. ಮಳೆಗಾಲದಲ್ಲಿ ಪ್ರಯಾಣಿಕರಿಗೆ ಯಾವುದೇತೊಂದರೆ ಆಗದ ರೀತಿಯಲ್ಲಿ ಕಾಮಗಾರಿಕೈಗೊಳ್ಳಲು ಸೂಚಿಸಲಾಗಿದೆ. ಗುತ್ತಿಗೆದಾರರು ಇನ್ನೂ ನಿಧಾನಗತಿಅನುಸರಿಸಿದರೆ ಸೂಕ್ತ ಕ್ರಮ ಜರಗಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.