ADVERTISEMENT

ಶಿರಸಿ | ಬೆಂಗಳೂರಿನಿಂದ ಬಂದ ವ್ಯಕ್ತಿಗೆ ಕೋವಿಡ್ ದೃಢ: ವಿಶಾಲ ನಗರ ಸೀಲ್‌ಡೌನ್

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 12:26 IST
Last Updated 3 ಜುಲೈ 2020, 12:26 IST
ಕೋವಿಡ್ 19 ದೃಢಪಟ್ಟಿರುವ ಶಿರಸಿಯ ವಿಶಾಲನಗರದ ವ್ಯಕ್ತಿಯನ್ನು ಆಂಬ್ಯುಲೆನ್ಸ್‌ನಲ್ಲಿ ಕಾರವಾರಕ್ಕೆ ಕರೆದೊಯ್ಯಲಾಯಿತು
ಕೋವಿಡ್ 19 ದೃಢಪಟ್ಟಿರುವ ಶಿರಸಿಯ ವಿಶಾಲನಗರದ ವ್ಯಕ್ತಿಯನ್ನು ಆಂಬ್ಯುಲೆನ್ಸ್‌ನಲ್ಲಿ ಕಾರವಾರಕ್ಕೆ ಕರೆದೊಯ್ಯಲಾಯಿತು   

ಶಿರಸಿ: ಬೆಂಗಳೂರಿಗೆ ಹೋಗಿ ಬಂದಿದ್ದ ವ್ಯಕ್ತಿಯೊಬ್ಬರಿಗೆ ಶುಕ್ರವಾರ ಕೋವಿಡ್ 19 ಕಾಯಿಲೆ ದೃಢಪಟ್ಟ ಹಿನ್ನೆಲೆಯಲ್ಲಿ ಇಲ್ಲಿನ ಮರಾಠಿಕೊಪ್ಪದ ವಿಶಾಲ ನಗರ ಹಾಗೂ ಎರಡು ಆಸ್ಪತ್ರೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಬಂಗಾರದ ಕೆಲಸ ಮಾಡುತ್ತಿದ್ದ ಈ ಸೋಂಕಿತ ವ್ಯಕ್ತಿ ಜೂನ್ 23ರಂದು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿ, ಮರುದಿನ ವಾಪಸ್ಸಾಗಿದ್ದರು. ನಂತರ ಜ್ವರ ಕಾಣಿಸಿಕೊಂಡ ಕಾರಣ ಅವರು, ಜೂನ್ 29ರಂದು ಕ್ಲಿನಿಕ್‌ಗೆ ಹೋಗಿ ಔಷಧ ತಂದಿದ್ದರು. ಚಿಕಿತ್ಸೆ ನೀಡಿದ ವೈದ್ಯರು, ಈ ವಿಷಯವನ್ನು ತಾಲ್ಲೂಕು ಆಸ್ಪತ್ರೆಯ ಗಮನಕ್ಕೆ ತಂದಿದ್ದರಿಂದ, ಜ್ವರಪೀಡಿತ ವ್ಯಕ್ತಿಯ ಗಂಟಲು ದ್ರವ ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಹೋಂ ಕ್ವಾರಂಟೈನ್‌ನಲ್ಲಿರುವ ಅವರನ್ನು, ಕಾರವಾರ ಕ್ರಿಮ್ಸ್‌ಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ವ್ಯಕ್ತಿಯ ಮನೆ ಇರುವ ಪ್ರದೇಶ ಮತ್ತು ಚಿಕಿತ್ಸೆ ಪಡೆಯಲು ಹೋಗಿದ್ದ ಒಂದು ಕ್ಲಿನಿಕ್ ಹಾಗೂ ಒಂದು ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಚಿಕಿತ್ಸೆ ನೀಡಿರುವ ವೈದ್ಯರ ಗಂಟಲು ದ್ರವ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.