ಕಾರವಾರ: ತಾಲ್ಲೂಕಿನ ಮಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರೂರು ಸಮೀಪ ಗುಡ್ಡ ಬಿರುಕು ಬಿಟ್ಟಿದೆ. ರಸ್ತೆಯ ನಡುವೆ ಸುಮಾರು ಆರು ಇಂಚುಗಳಷ್ಟು ಬಿರುಕು ಕಾಣಿಸಿಕೊಂಡಿದೆ.
ಮಲ್ಲಾಪುರದಿಂದ ಕೈಗಾಕ್ಕೆ ಸಾಗಿ ಹರೂರು- ಬಾರೆ ಮೂಲಕ ಯಲ್ಲಾಪುರ ತಾಲ್ಲೂಕಿನ ಇಡಗುಂದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಈ ಭಾಗದಲ್ಲಿ ಮನೆಗಳಿಲ್ಲ. ಕಾಡಿನ ಮಧ್ಯೆ ಸಾಗುವ ದಾರಿ ಇದಾಗಿದ್ದು, ಗುಡ್ಡ ಕುಸಿದರೆ ಇಡಗುಂದಿ- ಮಲ್ಲಾಪುರ ನಡುವೆ ಸಂಪರ್ಕ ಕಡಿತವಾಗಲಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ನಿಲ್ಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.