ADVERTISEMENT

ಕಾರವಾರ: ಬೆಳೆ ವಿಮೆ ನೋಂದಣಿ ಅವಧಿ ಆ.7ರ ವರೆಗೆ ವಿಸ್ತರಣೆ 

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2023, 13:55 IST
Last Updated 3 ಆಗಸ್ಟ್ 2023, 13:55 IST
   

ಕಾರವಾರ: ತೋಟಗಾರಿಕೆ ಇಲಾಖೆಯು 2023ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ವಿಮೆ ಕಂತನ್ನು ಪಾವತಿಸುವ ಅವಧಿಯನ್ನು ಆ.7ರ ವರೆಗೆ ವಿಸ್ತರಿಸಿದೆ.

ಈ ಹಿಂದೆ ಜುಲೈ 31ಕ್ಕೆ ಕಂತು ಪಾವತಿಗೆ ಕೊನೆಯ ದಿನವಾಗಿತ್ತು. ರೈತರ ಹಿತದೃಷ್ಟಿಯಿಂದ ಅವಧಿ ವಿಸ್ತರಿಸಲಾಗಿದೆ.

ರೈತರು ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿ ಅಥವಾ ಬ್ಯಾಂಕ್ ಶಾಖೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ತೋಟಗಾರಿಕಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.