ಕಾರವಾರ:ಲೋಕಸಭಾ ಚುನಾವಣೆಯಲ್ಲಿ ಕಾರವಾರ ವಿಧಾನಸಭಾ ಕ್ಷೇತ್ರದ ಸೆಕ್ಟರ್ ಅಧಿಕಾರಿಯಾಗಿದ್ದ ರವಿಕಾಂತ ಆರ್. ಮಾಳ್ಸೇಕರ್ (52), ಶುಕ್ರವಾರ ತಡರಾತ್ರಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಕಾರವಾರ ತಾಲ್ಲೂಕಿನ ಬಿಣಗಾದವರಾದ ಅವರು, ಸಮಾಜ ಕಲ್ಯಾಣ ಇಲಾಖೆಯ ಅಂಕೋಲಾದ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾಗಿದ್ದರು.
ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಅಂಕೋಲಾ ಸಮೀಪ ಅಕ್ರಮವಾಗಿ ಮದ್ಯ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಸಂಬಂಧ ತಮ್ಮ ಮನೆಯಿಂದ ವಾಹನದಲ್ಲಿ ಅವರು ಹೊರಟಿದ್ದರು. ರಾತ್ರಿ 12ರ ಸುಮಾರಿಗೆ ಎದೆನೋಯುತ್ತಿರುವುದಾಗಿ ವಾಹನ ಚಾಲಕರಿಗೆ ತಿಳಿಸಿದ್ದರು. ಕೂಡಲೇ ಅವರನ್ನು ಪಟ್ಟಣದ ಕಮಲಾಬಾಯಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅವರು ಅಲ್ಲಿ ಮೃತಪಟ್ಟರು.
ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಮೌನಾಚರಣೆ ಮಾಡಿ, ಶ್ರದ್ಧಾಂಜಲಿ ಸಲ್ಲಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.