ADVERTISEMENT

ಹಣಕಾಸು ಸಚಿವರನ್ನು ಭೇಟಿ ಮಾಡಿದ ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2019, 12:59 IST
Last Updated 5 ಅಕ್ಟೋಬರ್ 2019, 12:59 IST
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶಾಸಕ ಆರ್.ವಿ.ದೇಶಪಾಂಡೆ ಭೇಟಿ ಮಾಡಿದರು
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶಾಸಕ ಆರ್.ವಿ.ದೇಶಪಾಂಡೆ ಭೇಟಿ ಮಾಡಿದರು   

ಶಿರಸಿ: ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿ ಮಾಡಿ, ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತಂದರು.

ನಿರ್ಮಲಾ ಅವರು ಈ ಹಿಂದೆ ಕೈಗಾರಿಕಾ ಸಚಿವರಾಗಿ ಅನುಭವ ಇರುವ ದೇಶಪಾಂಡೆ ಅವರ ಬಳಿ ಅನೇಕ ವಿಷಯಗಳನ್ನು ಚರ್ಚಿಸಿ, ಉಪಯುಕ್ತ ಮಾಹಿತಿ ಪಡೆದರು.

ಸಚಿವರು ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು ಎಂದು ಶಾಸಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.