ಭೂಕುಸಿತದ ದೃಶ್ಯ
ಶಿರಸಿ: ಶಿರಸಿ ಕುಮಟಾ ಸಂಪರ್ಕ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಭೂಕುಸಿತ ಉಂಟಾಗಿ ವಾಹನ ಸಂಚಾರ ಕಡಿತವಾಗಿದೆ. ಕಳೆದೆರಡು ದಿನಗಳ ಅವಧಿಯಲ್ಲಿ ನಡೆದ ಎರಡನೇ ಭೂಕುಸಿತ ಪ್ರಕರಣ ಇದಾಗಿದೆ.
ಶನಿವಾರ ರಾತ್ರಿಯಿಂದ ಹೆಚ್ಚಿರುವ ಮಳೆಯ ಕಾರಣದಿಂದ ಭೂಕುಸಿತ ಸಂಭವಿಸಿರುವ ಸಾಧ್ಯತೆಯಿದೆ. ಪ್ರಸ್ತುತ ರಸ್ತೆ ನಿರ್ಮಾಣ ಕಂಪನಿಯಿಂದ ತೆರವು ಕಾರ್ಯ ಆರಂಭವಾಗಿದೆ' ಎಂಬುದು ತಾಲ್ಲೂಕು ಆಡಳಿತದ ಮಾಹಿತಿ.
ಶಿರಸಿ ಹಾಗೂ ಕುಮಟಾ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಗುಡ್ಡಗಳನ್ನು ಅವೈಜ್ಞಾನಿಕವಾಗಿ ಕತ್ತರಿಸಲಾಗಿದೆ. ಈ ಕಾರಣ ಕಳೆದ ಮಳೆಗಾಲದ ಸಂದರ್ಭದಲ್ಲಿಯೂ ಭೂಕುಸಿತ ಉಂಟಾಗಿತ್ತು. ಈ ಬಾರಿ ಮಳೆಗಾಲದ ಆರಂಭದಲ್ಲೇ ಎರಡು ಬಾರಿ ಘಟನೆ ಜರುಗಿದೆ. ಜೋರು ಮಳೆಯಾದರೆ ಇನ್ನಷ್ಟು ಕಡೆ ಅಪಾಯವಾಗುವ ಸಾಧ್ಯತೆಯಿದೆ. ಈ ರಸ್ತೆಯಲ್ಲಿ ಸಂಚರಿಸುವುದು ಎಂದರೆ ಭಯದಲ್ಲೇ ಸಾಗುವಂತಾಗಿದೆ' ಎಂಬುದು ಸ್ಥಳಿಕರಾದ ದೇವರಾಜ ಮರಾಠಿ ಮಾತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.