ADVERTISEMENT

ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಆಭರಣ ಕಳವು

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2019, 15:57 IST
Last Updated 11 ಅಕ್ಟೋಬರ್ 2019, 15:57 IST

ಕಾರವಾರ: ರೈಲಿನಲ್ಲಿ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಮಹಿಳೆಯ ಬಳಿಯಿದ್ದ ₹ 9 ಲಕ್ಷ ಮೌಲ್ಯದ ಆಭರಣ ಹಾಗೂ ಇತರ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ. ಈ ಬಗ್ಗೆ ಅವರು ಇಲ್ಲಿ ಗ್ರಾಮೀಣ ಪೊಲೀಸ್ ಠಾಣೆಗೆ ಗುರುವಾರ ಇ–ಮೇಲ್ಮೂಲಕದೂರು ನೀಡಿದ್ದಾರೆ.

ಮಂಗಳೂರು ಸಮೀಪದ ಕಾರ್ನಾಡ್ ನಿವಾಸಿ ಶಮೀಲಾ ಶೆಟ್ಟಿ ದೂರು ನೀಡಿದವರು. ಅವರು ಅ.7ರಂದು ‘ಮತ್ಸ್ಯಗಂಧ ಎಕ್ಸ್‌ಪ್ರೆಸ್’ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿಮಂಗಳೂರಿಗೆ ಪ್ರಯಾಣಿಸುತ್ತಿದ್ದರು.ತಮ್ಮ ಹ್ಯಾಂಡ್‌ ಬ್ಯಾಗ್‌ನಲ್ಲಿ ಚಿನ್ನಾಭರಣಗಳು, ಎಟಿಎಂ ಕಾರ್ಡ್, ಎರಡು ಮೊಬೈಲ್ ಫೋನ್‌ಗಳು ಹಾಗೂ ₹ 5 ಸಾವಿರ ನಗದು ಇತ್ತು. ಅದನ್ನು ಮಡಗಾಂನಿಂದ ಗೋಕರ್ಣ ಮಾರ್ಗ ಮಧ್ಯದಲ್ಲಿ ಕಳವು ಮಾಡಲಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ತಮ್ಮ ಬೋಗಿಯಲ್ಲಿದ್ದ, ಮುರ್ಡೇಶ್ವರಕ್ಕೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಅದನ್ನು ಕದ್ದಿರಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಾರವಾರ ಗ್ರಾಮೀಣ ಠಾಣೆ ಪಿಎಸ್‌ಐ ಪದ್ಮಾ ಎಸ್.ದೇವಳಿ ತನಿಖೆ ಕೈಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.