ADVERTISEMENT

ಡಾ.ರಾಮಚಂದ್ರ ಭಟ್ಟರಿಗೆ ಎನ್.ರಂಗನಾಥ ಶರ್ಮಾ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 20:02 IST
Last Updated 10 ಡಿಸೆಂಬರ್ 2020, 20:02 IST
ಡಾ.ರಾಮಚಂದ್ರ ಭಟ್ಟ ಕೋಟೆಮನೆ
ಡಾ.ರಾಮಚಂದ್ರ ಭಟ್ಟ ಕೋಟೆಮನೆ   

ಶಿರಸಿ: ಸಂಸ್ಕೃತ ಸಾಹಿತ್ಯದಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವ ರಾಜ್ಯಮಟ್ಟದ ಎನ್.ರಂಗನಾಥ ಶರ್ಮಾ ಪ್ರಶಸ್ತಿಯನ್ನು ಈ ಬಾರಿ ಬೆಂಗಳೂರಿನ ಶ್ರೀವ್ಯಾಸ ಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎನ್ .ರಾಮಚಂದ್ರ ಭಟ್ಟ ಕೋಟೆಮನೆ ಅವರಿಗೆ ನೀಡಲಾಗುವುದು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ಟ ನರೂರು ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಡಿ.18 ರಂದು ಕೊಪ್ಪ ತಾಲ್ಲೂಕಿನ ಪ್ರಭೋದಿನಿ ಗುರುಕುಲದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ ₹10 ಸಾವಿರ ನಗದು, ಫಲಕ, ಪ್ರಮಾಣ ಪತ್ರ ಒಳಗೊಂಡಿದೆ. ಸಾಹಿತ್ಯ ಪರಿಷತ್ತು ಹಾಗೂ ವಿದ್ವಾನ್ ರಂಗನಾಥ ಶರ್ಮಾ ಸೇವಾ ಪ್ರತಿಷ್ಠಾನ ಜಂಟಿಯಾಗಿ ಈ ಪ್ರಶಸ್ತಿ ನೀಡುತ್ತಿವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT