ADVERTISEMENT

ಶಾಸಕ ಸೈಲ್ ಮನೆಯಿಂದ ₹1.6 ಕೋಟಿ ನಗದು,6 ಕೆ.ಜಿ ಚಿನ್ನ ವಶಕ್ಕೆ ಪಡೆದ ಇ.ಡಿ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2025, 9:13 IST
Last Updated 15 ಆಗಸ್ಟ್ 2025, 9:13 IST
<div class="paragraphs"><p>ಸತೀಶ್ ಸೈಲ್‌</p></div>

ಸತೀಶ್ ಸೈಲ್‌

   

ಕಾರವಾರ: ಶಾಸಕ ಸತೀಶ ಸೈಲ್ ಮನೆ ಮೇಲೆ ಈಚೆಗೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಕೋಟ್ಯಂತರ ರೂಪಾಯಿ ನಗದು, ಕೆ.ಜಿಗಟ್ಟಲೇ ಚಿನ್ನ, ಆಭರಣ ವಶಕ್ಕೆ ಪಡೆದಿದ್ದಾರೆ.

‘₹1.68 ಕೋಟಿ ನಗದು, 6.75 ಕೆ.ಜಿ ತೂಕದ ಚಿನ್ನಾಭರಣ ಮತ್ತು ಚಿನ್ನದ ಬಿಸ್ಕತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಶಾಸಕ ಮತ್ತು ಬೇಲೆಕೇರಿ ಅದಿರು ಅಕ್ರಮ ಸಾಗಣೆ ಪ್ರಕರಣದಲ್ಲಿ ಭಾಗಿಯಾಗಿದ್ದವರ ಪೈಕಿ ಹಲವರ ಬ್ಯಾಂಕ್ ಖಾತೆಯಲ್ಲಿ ₹14.13 ಕೋಟಿ ಮೊತ್ತ ತಡೆ ಹಿಡಿಯಲಾಗಿದೆ’ ಎಂದು ಇ.ಡಿ ತನ್ನ ‘ಎಕ್ಸ್’ ಖಾತೆಯಲ್ಲಿ ಶುಕ್ರವಾರ ತಿಳಿಸಿದೆ.

ADVERTISEMENT

‘ಕಬ್ಬಿಣದ ಅದಿರು ಕಳ್ಳ ಸಾಗಣೆಗೆ ಸಂಬಂಧಿಸಿದಂತೆ ನಡೆದ ಹಣಕಾಸು ವಹಿವಾಟು ಮಾಹಿತಿ ಆಧರಿಸಿ ಸತೀಶ ಸೈಲ್ ಅವರ ಮನೆ, ಇನ್ನಿತರರ ಮನೆ, ಕಚೇರಿಗಳಲ್ಲಿ ತಪಾಸಣೆ ನಡೆಸಲಾಗಿತ್ತು. ಇ.ಡಿ ಬೆಂಗಳೂರು ವಿಭಾಗದ ಅಧಿಕಾರಿಗಳು ಕಾರವಾರ, ದೆಹಲಿ,ಗೋವಾ, ಮುಂಬೈ ಸೇರಿ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದರು’ ಎಂದು ತಿಳಿಸಿದೆ.

‘ದಾಳಿಗೆ ಕಾಂಗ್ರೆಸ್ ಶಾಸಕರೇ ಗುರಿ ಆಗಿದ್ದು, ಇದರ ಹಿಂದೆ ರಾಜಕೀಯ ದುರುದ್ದೇಶವಿದೆ. ಅನಾರೋಗ್ಯದಿಂದ ದೆಹಲಿ ಆಸ್ಪತ್ರೆಯಲ್ಲಿ ಸತೀಶ ಸೈಲ್ ದಾಖಲಾಗಿದ್ದರಿಂದ ದಾಳಿ ವೇಳೆ ಮನೆಗೆ ಬಂದಿರಲಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸುದ್ದಿಗಾರರಿಗೆ ತಿಳಿಸಿದರು.

ಕಾರವಾರ, ದೆಹಲಿ, ಗೋವಾ, ಮುಂಬೈನ ವಿವಿಧೆಡೆ ಪರಿಶೀಲನೆಯನ್ನು ಇ.ಡಿಯ ಬೆಂಗಳೂರು ವಿಭಾಗದ ತಂಡ ಕೈಗೊಂಡಿತ್ತು' ಎಂದು ಜಾರಿ ನಿರ್ದೇಶನಾಲಯ ತನ್ನ 'ಎಕ್ಸ್' ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

'ಪರಿಶೀಲನೆ ನಡೆಸಿದ ವೇಳೆ ₹1.68 ಕೋಟಿ ನಗದು, 6.75 ಕೆ.ಜಿ ತೂಕದಷ್ಟು ಬಂಗಾರದ ಆಭರಣ ಹಾಗೂ ಚಿನ್ನದ ಬಿಸ್ಕತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಭಾಗಿಯಾದವರ ಬ್ಯಾಂಕ್ ಖಾತೆಯಲ್ಲಿ ಅಂದಾಜು ₹14.13 ಕೋಟಿ ಮೊತ್ತವನ್ನು ತಡೆಹಿಡಿಯಲಾಗಿದೆ' ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.