ಕಾರವಾರ: ಇಲ್ಲಿನ ಶಾಸಕ ಸತೀಶ ಸೈಲ್ ನಿವಾಸದಲ್ಲಿ ಗುರುವಾರ ನಸುಕಿನ 4 ಗಂಟೆಯವರೆಗೂ ಪರಿಶೀಲನೆ ನಡೆಸಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ತಂಡವು ಹಲವು ದಾಖಲೆಗಳನ್ನು ವಶಕ್ಕೆ ಪಡೆಯಿತು.
‘24 ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿ, ಶಾಸಕರ ಮನೆಯಿಂದ ಗುರುವಾರ ನಸುಕಿನವರೆಗೆ ಹಂತಹಂತವಾಗಿ ನಿರ್ಗಮಿಸಿದರು. ದಾಖಲೆಗಳನ್ನು 4 ಪೆಟ್ಟಿಗೆಗಳಲ್ಲಿ ಒಯ್ದರು’ ಎಂದು ಮೂಲಗಳು ತಿಳಿಸಿವೆ.
‘ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ನಾಪತ್ತೆ ಪ್ರಕರಣದಲ್ಲಿ ಅಪರಾಧಿ ಆಗಿರುವ ಶಾಸಕ ಸತೀಶ ಸೈಲ್ ಈ ಹಿಂದೆ ನಡೆಸಿದ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಪರಿಶೀಲಿಸಿರಬಹುದು. ಸೈಲ್ ಮನೆಯಲ್ಲಿ ಇರದ ಕಾರಣಕ್ಕೆ ಅವರನ್ನು ಕರೆಯಿಸಲು ಅಧಿಕಾರಿಗಳು ಸಾಕಷ್ಟು ಪ್ರಯತ್ನ ನಡೆಸಿದರು. ಇದಕ್ಕಾಗಿ ಅವರ ಅಂಗರಕ್ಷಕ, ಆಪ್ತ ವಲಯದ ಒಂದಿಬ್ಬರನ್ನು ವಿಚಾರಣೆ ನಡೆಸಿದರು’ ಎಂದೂ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.