ADVERTISEMENT

ಈದ್ ಉಲ್ ಫಿತ್ರ್ | ಉತ್ತರಕನ್ನಡ ಜಿಲ್ಲೆಯಲ್ಲಿ ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2019, 6:37 IST
Last Updated 5 ಜೂನ್ 2019, 6:37 IST
ಭಟ್ಕಳದ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು
ಭಟ್ಕಳದ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು   

ಕಾರವಾರ: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್‌ ಆಚರಣೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಆರಂಭವಾಗಿದೆ. ಶ್ರದ್ಧಾ ಭಕ್ತಿಯೊಂದಿಗೆ ಮುಸ್ಲಿಮರು ಸಂಭ್ರಮದಿಂದ 'ಈದ್‌ ಉಲ್‌ ಫಿತರ್ ’ ಆಚರಣೆ ಮಾಡಿದರು.

ಮಂಗಳವಾರ ಚಂದ್ರ ದರ್ಶನವಾಯಿತು. ಈ ಹಿನ್ನೆಲೆಯಲ್ಲಿ 30 ದಿನಗಳ ಉಪವಾಸ ವ್ರತಾಚರಣೆಯನ್ನು ನಿಲ್ಲಿಸಿ ಜಿಲ್ಲೆಯಲ್ಲಿ ರಂಜಾನ್ ಹಬ್ಬ ಆಚರಿಸಿದರು.

ಭಟ್ಕಳದ ಈದ್ಗಾ ಮೈದಾನದಲ್ಲಿ ಸೇರಿದ ಸಾವಿರಾರು ಮುಸ್ಲಿಮರು ಅಲ್ಲಾಹುವಿಗೆ ದುವಾ ಸಲ್ಲಿಸಿದರು. ಪರಸ್ಪರ ಆಲಂಗಿಸುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು.

ADVERTISEMENT

ಜಿಲ್ಲೆಯಾದ್ಯಂತ ನೂರಾರು ಮಸೀದಿಗಳಲ್ಲೂ ಮುಂಜಾನೆ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮುಸ್ಲಿಮರು ಹೊಸ ಉಡುಗೆ ತೊಟ್ಟು ಪ್ರಾರ್ಥನೆ ಸಲ್ಲಿಸಿ ಸಂಭ್ರಮಿಸಿದರು.

ಭಟ್ಕಳದ ನವಾಯತ್ ಕಾಲೋನಿ, ಮದೀನಾ ಕಾಲೋನಿ, ಮಗ್ದುಂ ಕಾಲೊನಿ, ಚಿನ್ನದ ಪಳ್ಳಿ, ಕಾರವಾರದ ಗಫೂರಿ ಮಸೀದಿ, ಜಾಮಿಯಾ ಮಸೀದಿಗಳಲ್ಲಿ ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮಳೆಗಾಗಿಯೂ ಕಾರವಾರದ ಕೆಲವು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.