ಶಿರಸಿ: ಜಿಲ್ಲಾ ಮಧ್ಯವರ್ತಿ ಬ್ಯಾಂಕಿನ (ಕೆಡಿಸಿಸಿ) ನಿರ್ದೇಶಕ ಸ್ಥಾನದ ಚುನಾವಣೆ ಆರಂಭಗೊಂಡಿದೆ.
ನಗರದಲ್ಲಿರುವ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಕಚೇರಿಯ ಹೊರ ಆವರಣದಲ್ಲಿ ಅಭ್ಯರ್ಥಿಗಳು ಮತದಾರರ ಮನವೊಲಿಸುವ ಪ್ರಯತ್ನ ನಡೆಸುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಕೂಡ ತಮ್ಮ ಮತ ಚಲಾವಣೆ ಮಾಡಿದರು. ಸಂಸದ ಅನಂತಕುಮಾರ ಹೆಗಡೆ, ಕುಮಟಾ ಶಾಸಕ ದಿನಕರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಸೇರಿದಂತೆ ಹಲವು ಪ್ರಮುಖರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.