
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಹಜರತ್ ಮೆಹಬೂಬಸಾಬ ಕಟ್ಟಿಗೆ ಮಿಲ್ ಆವರಣದಲ್ಲಿ ಸಂಗ್ರಹಿಸಿಟ್ಟಿದ್ದ ಮರದ ದಿಮ್ಮಿಗಳಿಗೆ ಬುಧವಾರ ಆಕಸ್ಮಿಕ ಬೆಂಕಿ ತಗುಲಿ ಸುಮಾರು ₹2 ಲಕ್ಷ ಮೌಲ್ಯದ ಕಟ್ಟಿಗೆ ಹಾನಿಯಾಗಿದೆ. ಬೆಲೆ ಬಾಳುವ ಕಟ್ಟಿಗೆ ಬೆಂಕಿಗಾಹುತಿಯಾಗಿದೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದರು.
ಮಂಗಳವಾರ ಪಟ್ಟಣದ ನೆಹರೂ ನಗರದ ಸ.ನಂ.131ರಲ್ಲಿ ಮಾವಿನ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿತ್ತು. ಅಕ್ಕಪಕ್ಕದ ಅಡಿಕೆ, ಬಾಳೆ ತೋಟ ಹಾಗೂ ಕಬ್ಬಿನ ತೋಟಕ್ಕೂ ಬೆಂಕಿ ವ್ಯಾಪಿಸುವ ಸಾಧ್ಯತೆಯಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸಿದರು.
ಪ್ರಭಾರ ಅಗ್ನಿಶಾಮಕ ಠಾಣಾಧಿಕಾರಿ ಮೋಹನ ಬುಜಂಗನವರ್, ಸಂತೋಷ ಪಾಟೀಲ, ಅಡಿವೆಪ್ಪ ಕುರುವಿನಕೊಪ್ಪ, ಮಹಾಬಲೇಶ್ವರ ಶಿವನಗುಡಿ, ಹರೀಶ ಪಟಗಾರ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.