ADVERTISEMENT

ಭಟ್ಕಳ ನ್ಯಾಯಾಲಯದಲ್ಲಿ ಅಗ್ನಿ ಅವಘಡ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 14:35 IST
Last Updated 5 ಜುಲೈ 2021, 14:35 IST
   

ಭಟ್ಕಳ: ಪಟ್ಟಣದ ರಂಗಿನಕಟ್ಟಯಲ್ಲಿರುವ ಭಟ್ಕಳ ಜೆ.ಎಂ.ಎಫ್.ಸಿ. ನ್ಯಾಯಾಲಯ ಕಟ್ಟಡದಲ್ಲಿ ಶುಕ್ರವಾರ ನಸುಕಿನಲ್ಲಿ ಅಗ್ನಿ ಅವಘಡ ನಡೆದಿದೆ. ನ್ಯಾಯಾಲಯದ ಮುಂದಿನ ಭಾಗ ಸಂಪೂರ್ಣ ಸುಟ್ಟಿದೆ.

ಮೇಲ್ನೋಟಕ್ಕೆ, ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ 4.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಾಗ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದರು. ಹರಸಾಹಸ ಪಟ್ಟರೂ ಬೆಂಕಿಯ ಕೆನ್ನಾಲಿಗೆ ಮುಂಬದಿ ಕಟ್ಟಡವನ್ನು ಸಂಪೂರ್ಣ ಆವರಿಸಿತು.

ನ್ಯಾಯಾಲಯದಲ್ಲಿದ್ದ ಸಾವಿರಾರು ಕೇಸುಗಳ ಕಡತಗಳು ಅವಘಡದಲ್ಲಿ ಸುಟ್ಟುಹೋಗಿರುವ ಆತಂಕ ವ್ಯಕ್ತವಾಗಿತ್ತು. ಅದೃಷ್ಟವಶಾತ್ ಅವುಗಳಿಗೆ ಏನೂ ಆಗಿಲ್ಲ. ಅಗ್ನಿ ಶಾಮಕದಳದ ಸಿಬ್ಬಂದಿ ಕಡತಗಳನ್ನು ರಕ್ಷಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.