ADVERTISEMENT

ಕಾರವಾರ: ಜಿ.ಪಂ ಅಭಿಲೇಖಾಲಯ ಕಟ್ಟಡದಲ್ಲಿ ಬೆಂಕಿ

​ಪ್ರಜಾವಾಣಿ ವಾರ್ತೆ
Published 5 ಜೂನ್ 2021, 6:36 IST
Last Updated 5 ಜೂನ್ 2021, 6:36 IST
   

ಕಾರವಾರ: ನಗರದ ಜಿಲ್ಲಾ ಪಂಚಾಯಿತಿ ಮಹಾಅಭಿಲೇಖಾಲಯಕಟ್ಟಡದ ನೆಲ ಅಂತಸ್ತಿನಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅವಘಡ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಒಂದಷ್ಟು ಪೀಠೋಪಕರಣಗಳು, ಟಿ.ವಿ ಹಾನಿಗೀಡಾಗಿವೆ.

ವಿದ್ಯುತ್ ಶಾರ್ಟ್ ಸರ್ಕೀಟ್ ಆಗಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಪ್ರಿಯಾಂಗಾ, 'ಆರಂಭದಲ್ಲಿ 'ಕೆ-ಸ್ವಾನ್' ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಮರದ ಪೀಠೋಪಕರಣಗಳು ಸುಟ್ಟು ಹೋಗಿವೆ. ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ಹರಡುವುದನ್ನು ನಿಯಂತ್ರಿಸಿದ್ದಾರೆ. ಕಟ್ಟಡದ ಒಳಗೆ ಹೋಗಿ ನಾನು ಪರಿಶೀಲಿಸಿದ್ದೇನೆ. ದಾಖಲೆಗಳು ಮತ್ತು ಕಂಪ್ಯೂಟರ್ ಮೂರನೇ ಮಹಡಿಯಲ್ಲಿದ್ದು, ಅವುಗಳಿಗೆ ಹಾನಿಯಾಗಿಲ್ಲ. ಅವಘಡದ ಬಗ್ಗೆ ತನಿಖೆ ನಡೆಸಲಾಗುತ್ತಿದೆ' ಎಂದು ತಿಳಿಸಿದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರೂ ಭೇಟಿ ನೀಡಿ, ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಮರದ ಮತ್ತು ಪ್ಲೈವುಡ್ ಪೀಠೋಪಕರಣಗಳು ಇದ್ದ ಕಾರಣ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.