
ಕಾರವಾರ: ‘ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಹಕ್ಕುಪತ್ರ ಒದಗಿಸಲು ಉನ್ನತಮಟ್ಟದ ಸಭೆ ನಡೆಸಲು ಸರ್ಕಾರ ನಿರ್ಧರಿಸಬೇಕು’ ಎಂದು ಒತ್ತಾಯಿಸಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ನೇತೃತ್ವದಲ್ಲಿ ಶನಿವಾರ ಸಮಾವೇಶ ನಡೆಯಿತು.
‘ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲದ ಚಳಿಗಾಲ ಅಧಿವೇಶನದಲ್ಲಿ ಈ ಕುರಿತು ಚರ್ಚೆಯಾಗಬೇಕು’ ಎಂದು ಆಗ್ರಹಿಸಲಾಯಿತು.
ಸಾವಿರಾರು ಜನರು ನಗರದ ಮುಖ್ಯರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಬುಡಕಟ್ಟು ಸಮುದಾಯಗಳ ಜನರು, ಅರಣ್ಯವಾಸಿಗಳು ಪಾಲ್ಗೊಂಡಿದ್ದರು. ಇಲ್ಲಿನ ಮಾಲಾದೇವಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ 6 ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು.
ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಮಾತನಾಡಿ, ‘ಗದಗನಲ್ಲಿ ಎಚ್.ಕೆ.ಪಾಟೀಲ, ಉತ್ತರ ಕನ್ನಡದಲ್ಲಿ ಆರ್.ವಿ.ದೇಶಪಾಂಡೆ ಈ ಹಿಂದೆ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದ ಕೆಲ ಕುಟುಂಬಗಳಿಗೆ ಹಕ್ಕುಪತ್ರ ಕೊಡಿಸಿದ್ದರು. ಅದೇ ಮಾದರಿ ಅನುಸರಿಸಿ ಹಕ್ಕುಪತ್ರ ಒದಗಿಸಲು ಸರ್ಕಾರ ನಿರ್ಣಯಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.