ADVERTISEMENT

ಅರ್ಜಿ ತಿರಸ್ಕಾರದ ವಿರುದ್ಧ ಮೇಲ್ಮನವಿ; ಅ.4ರಿಂದ ಅರಣ್ಯವಾಸಿಗಳ ಅಭಿಯಾನ

ಅರಣ್ಯ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ಮಾಹಿತಿ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 23:39 IST
Last Updated 19 ಸೆಪ್ಟೆಂಬರ್ 2025, 23:39 IST
ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲಿಸದೆ ತಿರಸ್ಕರಿಸಿದ ಪ್ರಕ್ರಿಯೆ ವಿರುದ್ಧ ಮೇಲ್ಮನವಿ ಸಲ್ಲಿಸುವ ಅಭಿಯಾನದ ಕುರಿತ ಮಾಹಿತಿ ಭಿತ್ತಿಪತ್ರವನ್ನು ಕಾರವಾರದಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರು ಪ್ರದರ್ಶಿಸಿದರು.
ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲಿಸದೆ ತಿರಸ್ಕರಿಸಿದ ಪ್ರಕ್ರಿಯೆ ವಿರುದ್ಧ ಮೇಲ್ಮನವಿ ಸಲ್ಲಿಸುವ ಅಭಿಯಾನದ ಕುರಿತ ಮಾಹಿತಿ ಭಿತ್ತಿಪತ್ರವನ್ನು ಕಾರವಾರದಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರು ಪ್ರದರ್ಶಿಸಿದರು.   

ಕಾರವಾರ: ‘ಅರಣ್ಯವಾಸಿಗಳ ಅರ್ಜಿಯನ್ನು ಪುನರ್ ಪರಿಶೀಲಿಸದೆ, ತಿರಸ್ಕರಿಸಿದ್ದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಅ.4ರಂದು ಶಿರಸಿಯಲ್ಲಿ ಅಭಿಯಾನ ಆರಂಭಿಸಲಿದ್ದೇವೆ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

‘ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಮುನ್ನ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಂಬಂಧಿಸಿದ ಇಲಾಖೆಯ ಸಚಿವರ ಗಮನಕ್ಕೂ ತಂದಿಲ್ಲ’ ಎಂದೂ ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘ಅರ್ಜಿ ಪುನರ್ ಪರಿಶೀಲಿಸಬೇಕೆಂಬ ಅರಣ್ಯ ಹಕ್ಕು ಕಾಯ್ದೆ ನಿಯಮವನ್ನು ಅನುಸರಿಸಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನ ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಿಲ್ಲ. ವರದಿ ಪ್ರಕಾರ, ರಾಜ್ಯದಲ್ಲಿ 2,53,269 ಅರಣ್ಯವಾಸಿಗಳ ಅರ್ಜಿ ತಿರಸ್ಕರಿಸಲಾಗಿದೆ’ ಎಂದರು.

ADVERTISEMENT

‘ರಾಜ್ಯದಲ್ಲಿ ಒಟ್ಟು ಅರ್ಜಿಗಳಲ್ಲಿ ಶೇ 87.77 ಅರಣ್ಯವಾಸಿಗಳ ಅರ್ಜಿಗಳು ತಿರಸ್ಕೃತವಾಗಿವೆ. ಶೇ 3.2ರಷ್ಟು ಅರ್ಜಿದಾರರಿಗಷ್ಟೇ ಸಾಗುವಳಿ ಹಕ್ಕು ಸಿಕ್ಕಿದೆ. ಅರ್ಜಿ ತಿರಸ್ಕಾರದ ವಿರುದ್ಧ ಕಾನೂನಾತ್ಮಕ ಹೋರಾಟವೂ ನಡೆಯಲಿದೆ’ ಎಂದರು.

ಅ.14 ರಂದು ಅರಣ್ಯವಾಸಿಗಳ ಭವಿಷ್ಯದ ಕುರಿತ ಪ್ರಕರಣದ ಅಂತಿಮ ಹಂತದ ವಿಚಾರಣೆ ನಡೆಯಲಿದೆ. ಹೀಗಾಗಿ ರಾಜ್ಯವ್ಯಾಪಿ ಆಂದೋಲನ ನಡೆಸಲಾಗುತ್ತಿದೆ
– ರವೀಂದ್ರ ನಾಯ್ಕ, ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.