ADVERTISEMENT

ಮಾಜಿ ಸಚಿವ ಪಿ.ಎಸ್.ಜೈವಂತ ನಿಧನ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 13:20 IST
Last Updated 11 ಡಿಸೆಂಬರ್ 2020, 13:20 IST
   

ಶಿರಸಿ: ಮಾಜಿ ಸಚಿವ ಪ್ರೇಮಾನಂದ ಎಸ್.ಜೈವಂತ (77) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಅವರು ಕೆಲ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ.

1998ರಲ್ಲಿ ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದರು. ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಅವತು1994ರಲ್ಲಿ ಮೊದಲ ಬಾರಿಗೆ ಶಿರಸಿ ಕ್ಷೇತ್ರದಿಂದ ಶಾಸಕರಾಗಿದ್ದರು. 1999ರಲ್ಲಿ ಪಕ್ಷೇತರರಾಗಿ, 2004ರಲ್ಲಿ ಕಾಂಗ್ರೆಸ್ ನಿಂದ ಹಾಗೂ 2008ರಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದರು. ಇತ್ತೀಚಿನ ವರ್ಷಗಳಲ್ಲಿ ರಾಜಕೀಯದಿಂದ ದೂರ ಉಳಿದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT