ADVERTISEMENT

ಕುಮಟಾ ತಾಲೂಕಿನ ಬಾಡದ ಬಳಿ ನಾಲ್ವರು ಸಮುದ್ರಪಾಲು: ಇಬ್ಬರ ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 14:03 IST
Last Updated 25 ಜೂನ್ 2022, 14:03 IST
ಕುಮಟಾದಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿ ನೀರು ಪಾಲಾದವರ ಜೊತೆ ಬಂದಿದ್ದ ಪ್ರವಾಸಿಗರು ಶೋಧ ಕಾರ್ಯ ನಡೆಸುತ್ತಿರುವ ಸಿಬ್ಬಂದಿಗೆ ಮಾಹಿತಿ ನೀಡುತ್ತಿರುವುದು
ಕುಮಟಾದಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿ ನೀರು ಪಾಲಾದವರ ಜೊತೆ ಬಂದಿದ್ದ ಪ್ರವಾಸಿಗರು ಶೋಧ ಕಾರ್ಯ ನಡೆಸುತ್ತಿರುವ ಸಿಬ್ಬಂದಿಗೆ ಮಾಹಿತಿ ನೀಡುತ್ತಿರುವುದು   

ಕುಮಟಾ (ಉತ್ತರ ಕನ್ನಡ): ತಾಲ್ಲೂಕಿನ ಬಾಡದ ಬಳಿ ಶನಿವಾರ ಸಮುದ್ರಕ್ಕಿಳಿದ ನಾಲ್ವರು ಪ್ರವಾಸಿಗರು, ಅಲೆಗಳ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಅವರಲ್ಲಿ ಇಬ್ಬರ ಮೃತದೇಹಗಳು ಸಿಕ್ಕಿದ್ದು, ಇನ್ನಿಬ್ಬರಿಗೆ ಹುಡುಕಾಟ ಮುಂದುವರಿದಿದೆ.

ಮೃತರನ್ನು ಬೆಂಗಳೂರಿನ ಕಸ್ತೂರಬಾ ನಗರದ ಅರ್ಜುನ್ (23) ಹಾಗೂ ಪೀಣ್ಯದ ಚೈತ್ರಶ್ರೀ (27) ಎಂದು ಗುರುತಿಸಲಾಗಿದೆ. ರಾಜಾಜಿನಗರದ ತೇಜಸ್.ಡಿ (22) ಹಾಗೂ ಕನಕಪುರ ರಸ್ತೆಯ ಕಿರಣಕುಮಾರ (27) ಎಂಬುವವರಿಗೆ ಶೋಧ ಕಾರ್ಯ ಮಾಡಲಾಗುತ್ತಿದೆ. ಅವರು ಬೆಂಗಳೂರಿನ ಲೆಕ್ಕ ಪರಿಶೋಧನಾ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದರು.

ಶನಿವಾರ ಬೆಳಿಗ್ಗೆ ಎರಡು ಬಸ್‌ಗಳಲ್ಲಿ ಸುಮಾರು 85 ಮಂದಿ ಬಾಡದ ಸಿಲ್ವರ್ ಸ್ಯಾಂಡ್ ಬೀಚ್ ರೆಸಾರ್ಟ್‌ಗೆ ಬಂದಿದ್ದರು. ಅವರಲ್ಲಿ ನಾಲ್ವರು ಮಧ್ಯಾಹ್ನ ಊಟದ ಸಮಯದಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದಾಗ ಅವಘಡ ನಡೆದಿದೆ ಎಂದು ತಹಶೀಲ್ದಾರ್ ವಿವೇಕ ಶೇಣ್ವಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.