
ಹಳಿಯಾಳ: ಪಟ್ಟಣದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ವಿಮಲ ವಿ.ದೇಶಪಾಂಡೆ ಸ್ಕೂಲ್ ಆಫ್ ಎಕ್ಸಲೆನ್ಸ್ನ ವಿದ್ಯಾರ್ಥಿಗಳು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವನ್ನು ವೀಕ್ಷಿಸಿದರು.
ವಿದ್ಯಾರ್ಥಿಗಳಿಗೆ ಶಾಸಕಾಂಗದ ಕಾರ್ಯವಿಧಾನ, ವಿಧಾನಮಂಡಲದ ಮಹತ್ವ ಹಾಗೂ ಅಧಿವೇಶನದ ಸಂದರ್ಭದಲ್ಲಿ ನಡೆಯುವ ಚರ್ಚೆಗಳ ಕುರಿತು ಶಾಸಕ ಆರ್.ವಿ. ದೇಶಪಾಂಡೆ ವಿವರಿಸಿದರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಶಾಸಕರು ಉತ್ತರಿಸಿ, ವಿಧಾನಸಭಾ ಕಲಾಪದ ಸಂಕ್ಷಿಪ್ತ ಪರಿಚಯವನ್ನೂ ನೀಡಿ ಉತ್ತಮ ನಾಗರಿಕರಾಗಿ ಬೆಳೆಯುವಲ್ಲಿ ಸಂವಿಧಾನಿಕ ಮೌಲ್ಯಗಳ ಅರಿವು, ಜಾಗೃತಿ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಯ ಗೌರವದ ಅಗತ್ಯತೆಯ ಕುರಿತು ವಿವರಿಸಿದರು.
ಶಾಲಾ ಶಿಕ್ಷಕಿ ನೆಲ್ಸಿ ಫರ್ನಾಂಡಿಸ್, ಮಲ್ಲಿಕಾರ್ಜುನ ಗೌಡ ಹುಳ್ಳೂರ್, ಡಿಪಿಐಟಿಐ ಪ್ರಾಚಾರ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.