ADVERTISEMENT

ಭಟ್ಕಳ: ಯಕ್ಷಗಾನ ವೇಷಭೂಷಣ ಧರಿಸಿ, ಹೆಜ್ಜೆ ಹಾಕಿದ ಸಚಿವ ಸುಧಾಕರ್

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2022, 7:09 IST
Last Updated 12 ಅಕ್ಟೋಬರ್ 2022, 7:09 IST
ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಯಕ್ಷಗಾನ ವೇಷಭೂಷಣ ಧರಿಸಿ, ಕಲಾವಿದರೊಂದಿಗೆ ಹೆಜ್ಜೆ ಹಾಕಿದರು.
ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಯಕ್ಷಗಾನ ವೇಷಭೂಷಣ ಧರಿಸಿ, ಕಲಾವಿದರೊಂದಿಗೆ ಹೆಜ್ಜೆ ಹಾಕಿದರು.   

ಭಟ್ಕಳ: ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಮಂಗಳವಾರ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ ರಾಜ್ಯ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ನಂತರ ಭಟ್ಕಳ ಶಾಸಕ ಸುನೀಲ ನಾಯ್ಕ ಅವರ ಅತಿಥಿ ಗೃಹಕ್ಕೆ ಭೇಟಿ ನೀಡಿ ಅಲ್ಲಿ ಯಕ್ಷಗಾನ ವೀಕ್ಷಿಸಿದರು. ಸ್ವತಃ ಯಕ್ಷಗಾನ ವೇಷಭೂಷಣ ಧರಿಸಿದರು. ನಂತರ ಕಲಾವಿದರ ಜೊತೆ ಹೆಜ್ಜೆ ಹಾಕಿ ಗಮನ ಸೆಳೆದರು.

ಯಕ್ಷಗಾನ ಅಭಿರುಚಿ ಇರುವ ಸಚಿವರ ಬಗ್ಗೆ ಅರಿತಿದ್ದ ಶಾಸಕ ಸುನೀಲ ನಾಯ್ಕ, ಅವರಿಗಾಗಿಯೇ ಯಕ್ಷಗಾನ ಪ್ರಸಂಗ ಏರ್ಪಡಿಸಿದ್ದರು. ಹೊನ್ನಾವರ, ಗುಣವಂತೆ ಭಾಗದ ಆಯ್ದ ಕಲಾವಿದರು 'ಭೀಷ್ಮ ವಿಜಯ' ಎಂಬ ಯಕ್ಷಗಾನ ಪ್ರಸಂಗವನ್ನು ಆಡಿ ತೋಡಿಸಿದರು.

ಬೆಳಿಗ್ಗೆಯಿಂದ ಜಿಲ್ಲೆಯಲ್ಲಿ ಪ್ರವಾಸದಲ್ಲಿದ್ದ ಸಚಿವರು ಪ್ರಯಾಣದಿಂದ ಆಯಾಸಗೊಂಡರೂ ಆಸಕ್ತಿಯಿಂದ ಯಕ್ಷಗಾನ ವೀಕ್ಷಿಸಿದರು. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೂಡ ಜೊತೆಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.