ADVERTISEMENT

ಉತ್ತರ ಕನ್ನಡದ ಕರಾವಳಿಯಲ್ಲಿ ವರ್ಷಧಾರೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 9:17 IST
Last Updated 30 ಜೂನ್ 2022, 9:17 IST
ಭಟ್ಕಳದ ಶಿರಾಲಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಜಲಾವೃತವಾಗಿರುವುದು
ಭಟ್ಕಳದ ಶಿರಾಲಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಜಲಾವೃತವಾಗಿರುವುದು   

ಕಾರವಾರ: ಉತ್ತರ ಕನ್ನಡದ ಕರಾವಳಿಯಲ್ಲಿ ಗುರುವಾರ ನಸುಕಿನಿಂದಲೇ ಜೋರಾಗಿ ಮಳೆಯಾಗುತ್ತಿದೆ. ದಟ್ಟವಾದ ಮೋಡ ಕವಿದಿದ್ದು, ವರ್ಷಧಾರೆ ಮುಂದುವರಿಯುವ ಲಕ್ಷಣಗಳಿವೆ.

ಭಟ್ಕಳದ ಶಿರಾಲಿಯಲ್ಲಿ ಜನತಾ ವಿದ್ಯಾಲಯದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಹರಿಯುತ್ತಿದೆ. ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಅಸಮರ್ಪಕವಾದ ಚತುಷ್ಪಥ ಕಾಮಗಾರಿಯಿಂದ ಸಮಸ್ಯೆಯಾಗಿದೆ ಎಂದು ಸ್ಥಳೀಯರು ಐ.ಆರ್.ಬಿ ಕಂಪನಿ ಮತ್ತು ರಾಷ್ಟ್ರೀಯ ಹೆ‌ದ್ದಾರಿ ಪ್ರಾಧಿಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾರವಾರ ನಗರದ ಹಬ್ಬುವಾಡದಲ್ಲಿ ಚರಂಡಿ ಉಕ್ಕಿ ಹರಿಯುತ್ತಿದೆ. ರಾಜ್ಯ ಹೆದ್ದಾರಿ ಮತ್ತೊಮ್ಮೆ ಜಲಾವೃತವಾಗುವ ಹಂತದಲ್ಲಿದೆ. ಇದೇ ರೀತಿ ಹಲವು ಬಡಾವಣೆಗಳಲ್ಲಿ ನೀರು ನಿಂತಿದೆ.

ADVERTISEMENT

ಮಲೆನಾಡಿನ ಶಿರಸಿ, ಯಲ್ಲಾಪುರ, ಜೊಯಿಡಾ, ಸಿದ್ದಾಪುರ ಭಾಗದಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಮುಂಡಗೋಡ ಮತ್ತು ಹಳಿಯಾಳದಲ್ಲೂ ಮಳೆಯಾಗಿದೆ.

24 ಗಂಟೆಗಳಲ್ಲಿ ಅಂಕೋಲಾದಲ್ಲಿ 11.6 ಸೆಂಟಿಮೀಟರ್, ಹೊನ್ನಾವರದಲ್ಲಿ 11.3 ಸೆಂಟಿಮೀಟರ್, ಕಾರವಾರದಲ್ಲಿ 9.1 ಸೆಂಟಿಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.