ಕಾರವಾರ: ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಗುರುವಾರ ಬೆಳಗಿನ ಜಾವದಿಂದ ಭಾರಿ ಮಳೆಯಾಗುತ್ತಿದೆ. ಗುಡುಗು ಮತ್ತು ಗಾಳಿಯೂ ಜೊತೆಯಾಗಿವೆ.
ಕಾರವಾರ ತಾಲ್ಲೂಕಿನ ಅಮದಳ್ಳಿ ಹಾಗೂ ಮುದಗಾ ಸುತ್ತಮುತ್ತ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎರಡು ಅಡಿಗಳಿಗೂ ಅಧಿಕ ಪ್ರಮಾಣದಲ್ಲಿ ನೀರು ನಿಂತಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ಅಮದಳ್ಳಿಯ ವೀರಗಣಪತಿ ದೇವಸ್ಥಾನದ ಆವರಣದಲ್ಲೂ ನೀರು ತುಂಬಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.